ವಿಜಯನಗರ | ಹಿರಿಯ ಸಂಶೋಧಕ ಡಾ. ಕೆ ರವೀಂದ್ರನಾಥರಿಗೆ ಒಲಿದ ʼಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿʼ

Date:

Advertisements

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ನಾಡಿನ ಹಸ್ತಪ್ರತಿ ಕ್ಷೇತ್ರದ ಹಿರಿಯ ಸಂಶೋಧಕ ಡಾ. ಕೆ ರವೀಂದ್ರನಾಥ ಅವರು ಕಲಬುರಗಿಯ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ನೀಡುವ 2025ನೇ ಸಾಲಿನ ʼಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿʼಗೆ ಭಾಜನರಾಗಿದ್ದಾರೆ ಎಂದು ಪೀಠದ ನಿರ್ದೇಶಕ ಪ್ರೊ. ಎಸ್ ಸಿ ಪಾಟೀಲ್ ತಿಳಿಸಿದರು.

ರವೀಂದ್ರನಾಥ ಅವರು ಹಸ್ತಪ್ರತಿಯ ಗ್ರಂಥ ಸಂಪಾದನೆ, ಚರಿತ್ರೆ-ದಾಖಲು ಸಾಹಿತ್ಯ, ವಚನ ಸಾಹಿತ್ಯ ಹಾಗೂ ಹಸ್ತಪ್ರತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಶ್ರೇಷ್ಠ ಸಂವಿಧಾನವೇ‌ ಆಧಾರ; ಶಾಸಕಿ‌ ಎಮ್ ಪಿ ಲತಾ

Advertisements

ಅವರ ಸೇವೆಯನ್ನು ಗುರುತಿಸಿ ಚಾಲುಕ್ಯ ಪೀಠವು ಈ ಬಾರಿಯ ʼಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿʼಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. ಈ ಪ್ರಶಸ್ತಿಯು ಫಲಕದೊಂದಿಗೆ ₹25 ಸಾವಿರ ನಗದು ಒಳಗೊಂಡಿರುತ್ತದೆ. ಕೂಡಲಸಂಗಮದಲ್ಲಿ ಫೆ. 1 ಮತ್ತು 2ರಂದು ನಡೆಯುವ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ 3ನೇ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ನಿರ್ದೇಶಕ ಪಾಟೀಲ್‌ ಮಾಹಿತಿ ಹಂಚಿಕೊಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X