ಸಾಗರ | ಪರ್ಮಿಟ್‌ ಇಲ್ಲದೇ ಕೆಎಸ್‌ಆರ್‌ಟಿಸಿ ಓಡಾಟ; ಬಸ್ ತಡೆದು ಖಾಸಗಿ ಬಸ್ ಮಾಲಿಕರ ಪ್ರತಿಭಟನೆ

Date:

Advertisements

ಶಿವಮೊಗ್ಗ ಜಿಲ್ಲೆಯ ಸಾಗರದ ಬಿ ಹೆಚ್ ರಸ್ತೆಯ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ರೂಟ್ ಪರ್ಮಿಟ್ ಇಲ್ಲದೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸುವುದನ್ನು ತಡೆದು ಖಾಸಗಿ ಬಸ್ ಮಾಲಿಕರು ಹಾಗೂ ಚಾಲಕರು ಉಪವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

“ಸಾಗರದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಹೊರ ಜಿಲ್ಲೆಗಳಿಗೂ ಖಾಸಗಿ ಬಸ್ ಓಡಿಸಿ ಮಾಲಿಕರು ಹಾಗೂ ಚಾಲಕರು ತಮ್ಮ ಸೇವೆ ಒದಗಿಸುತ್ತಾ ಅದರಲ್ಲೇ ತಮ್ಮ ಜೀವನ ಕಟ್ಟಿಕೊಂಡಿರುತ್ತಾರೆ. ಆದರೆ ಕೊರೋನಾ ಬಂದ ಬಳಿಕ ಖಾಸಗಿ ಬಸ್‌ಗಳು ಮೂಲೆ ಗುಂಪಾಗಿವೆ. ಸರ್ಕಾರದ ತೆರಿಗೆ, ಚಾಲಕ ನಿರ್ವಾಹಕರ ಸಂಬಳ ಕೊಡಲಾಗದೆ ಬಸ್‌ಗಳನ್ನು ಮಾರುವ ಪರಿಸ್ಥಿತಿ ಬಂದೊದಿಗಿದೆ. ಅಷ್ಟೇ ಅಲ್ಲದೆ ಈ ಬಾರೀ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಶಕ್ತಿ ಯೋಜನೆ ಜಾರಿ ಆಗಿ ಮಹಿಳೆಯರು ಯಾರೂ ಖಾಸಗಿ ಬಸ್ ಬಳಸುತ್ತಿಲ್ಲ. ಅದರ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಯವರು ರೂಟ್ ಪರ್ಮಿಟ್ ಇಲ್ಲದಿದ್ದರೂ ಯಾವಾವುದೋ ಸಮಯಕ್ಕೆ ಬಸ್ ಗಳನ್ನು ಓಡಿಸುತ್ತಿದ್ದಾರೆ. ಇದರಿಂದ ಖಾಸಗಿ ಬಸ್‌ ಮಾಲಿಕರಿಗೆ ನಷ್ಟ ಉಂಟಾಗಿ ಜೀವನ ಹೊರೆ ಬರೆಯಾಗಿ ಪರಿಣಮಿಸಿದೆ” ಎಂದು ಅಳಲು ತೋಡಿಕೊಂಡರು.

ಅಧಿಕಾರಿಗಳು ಖಾಸಗಿ ಬಸ್‌ಗಳ ಕಡೆ ಗಮನ ಹರಿಸುತ್ತಿಲ್ಲ. ವಿಷ ಕುಡಿಯುವ ಪರಿಸ್ಥಿತಿ ನಮ್ಮದಾಗಿದೆ ಎಂದು ತಮ್ಮ ಆಕ್ರೋಶ ಹೊರ ಹಾಕಿ ನಮ್ಮನ್ನು ರಕ್ಷಣೆ ಮಾಡಿ ಇಲ್ಲವಾದರೆ ನಮಗೆ ದಯಾ ಮರಣ ನೀಡಿ ಎಂದು ಸರ್ಕಾರಕ್ಕೆ ಅವಲತ್ತುಕೊಂಡು ಮನವಿ ಸಲ್ಲಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಸಾಗರ | ಜ.18ರಿಂದ ಕನ್ನಡದಲ್ಲಿ ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮ

ಪ್ರತಿಭಟನೆಯಲ್ಲಿ ಖಸಾಗಿ ಬಸ್ ಮಾಲಿಕರ ಸಂಘದ ಅಯಕ್ಷ, ಎಸ್ ಜಿ ಎಂ ಟಿ ಕಂಪನಿ ಮಾಲಿಕ ರಾಧಾ ಸುಭಾಶ್ ನಾಯ್ಕ, ಉಪಾಧ್ಯಕ್ಷ ಯೋಗ ಕುಮಾರ್, ಹಾಗೂ ಕುಮಾರ್ ಗುಡ್ಡೆಮನೆ ನಾಗರಾಜ್ ಗೋಪಾಲ್ ಶೆಟ್ರು, ತಿಮ್ಮಪ್ಪ ಶೆಟ್ರು, ರಫೀಕ್ ರಿಪ್ಪನ್‌ಪೇಟೆ, ಪ್ರತಾಪ್ ಜೆ. ಆರ್. ಬಿ ಹಾಗೂ ಇನ್ನೂ ಹಲವಾರು ಬಸ್ ಮಾಲಿಕರು ಹಾಗೂ ಚಾಲಕರು ಏಜೆಂಟರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X