ಕಾಂಗ್ರೆಸ್ ಅಥವಾ ಎಎಪಿ ಪರ ಶಿವಸೇನೆ ಪ್ರಚಾರ ಮಾಡಲ್ಲ: ಸಂಜಯ್ ರಾವತ್

Date:

Advertisements

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಎಎಪಿ ಪರವಾಗಿ ಪ್ರಚಾರ ಮಾಡುವುದಿಲ್ಲ. ನಮ್ಮ ಪಕ್ಷವು ತಟಸ್ಥ ನಿಲುವನ್ನು ಅಳವಡಿಸಿಕೊಂಡಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಮಂಗಳವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಇಂಡಿಯಾ ಒಕ್ಕೂಟದ ಭಾಗವಾಗಿ ಮೈತ್ರಿಯಾಗಿ ಸ್ಪರ್ಧಿಸಿದ್ದವು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ. ಈ ನಡುವೆ ಇಂಡಿಯಾ ಒಕ್ಕೂಟದ ಭಾಗವಾಗಿರುವ ಕೆಲವು ಪಕ್ಷಗಳು ಎಎಪಿಗೆ ಬೆಂಬಲ ನೀಡಿದೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಶೇ.46ರಷ್ಟು ಅಭ್ಯರ್ಥಿಗಳು 5-12ನೇ ತರಗತಿ ಶಿಕ್ಷಣ ಪಡೆದವರು

Advertisements

ಆದರೆ ಶಿವಸೇನೆ ತಟಸ್ಥವಾಗಿರಲು ನಿರ್ಧರಿಸಿದೆ. “ಇಂಡಿಯಾ ಒಕ್ಕೂಟದ ಎಎಪಿ ಮತ್ತು ಕಾಂಗ್ರೆಸ್ ಎರಡೂ ಕೂಡಾ ಶಿವಸೇನೆ (ಯುಬಿಟಿ) ಸ್ನೇಹಿತರು ಎಂದು ಸಂಜಯ್ ರಾವತ್ ಒತ್ತಿ ಹೇಳಿದ್ದಾರೆ. ಮಾಧ್ಯಮದ ಪ್ರಶ್ನೆಗೆ ಉತ್ತರಿಸುತ್ತಾ ಈ ಹೇಳಿಕೆಯನ್ನು ನೀಡಿದ್ದಾರೆ.

ಈಗಾಗಲೇ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷಕ್ಕೆ ತಮ್ಮ ಬೆಂಬಲವನ್ನು ಘೋಷಿಸಿದೆ. ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಿಜೆಪಿಗೆ ಬೆಂಬಲ ನೀಡಿದೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 2020ರಲ್ಲಿ 70 ವಿಧಾನಸಭೆ ಕ್ಷೇತ್ರಗಳ ಪೈಕಿ ಒಟ್ಟು 62 ಸ್ಥಾನಗಳನ್ನು ಗೆದ್ದಿದ್ದ ಎಎಪಿಯು ಭರ್ಜರಿ ಗೆಲುವು ಕಂಡಿದೆ. ಇದೀಗ ಅರವಿಂದ್ ಕೇಜ್ರಿವಾಲ್ ಸತತ ಮೂರನೇ ಬಾರಿಗೆ ಅಧಿಕಾರ ಚುಕ್ಕಾಣಿಯನ್ನು ಪಡೆಯುವ ಪ್ರಯತ್ನವನ್ನು ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X