ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

Date:

Advertisements
  • 2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ʼ ದತ್ತಿ ಪ್ರಶಸ್ತಿ ಪ್ರದಾನ
  • ನಾಡಿನ 12 ಮಂದಿ ಗಣ್ಯರಿಗಷ್ಟೇ ಪ್ರದಾನವಾಗಿರುವ ಒಡೆಯರ್ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆಯ್ಕೆಯಾಗಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, 2022ನೇ ಸಾಲಿನ ಪ್ರಶಸ್ತಿಯನ್ನು ಶೀಘ್ರದಲ್ಲೇ ದೇವೇಗೌಡರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಇದುವರೆಗೆ ನಾಡಿನ 12 ಮಂದಿಗೆ ಪ್ರದಾನವಾಗಿರುವ ಈ ದತ್ತಿ ಪ್ರಶಸ್ತಿ ಸ್ವೀಕರಿಸುತ್ತಿರುವ ಮೊದಲ ಕನ್ನಡಿಗನೆನ್ನುವ ಶ್ರೇಯ ಮಾಜಿ ಪ್ರಧಾನಿಗಳ ಪಾಲಾಗಿದೆ.

Advertisements

ನಾಡಿನ ಅಭ್ಯುದಯದ ಕನಸು ಕಂಡ ನಾಲ್ವಡಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯನ್ನು ಕೈಗಾರಿಕಾ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲಿಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಕೊಡಮಾಡಲಾಗುತ್ತದೆ.

ಸದರಿ ಪ್ರಶಸ್ತಿ 51,000 ರೂಪಾಯಿ ನಗದು, ಸ್ಮರಣಿಕೆ, ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ.

ಸಮಗ್ರ ಕನ್ನಡ ನಾಡಿನ ಅಭಿವೃದ್ಧಿಗೆ ಕಟಿಬದ್ಧರಾಗಿ ಕೆಲಸ ನಿರ್ವಹಿಸಿದ ದೇವೇಗೌಡರು, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ಹೋರಾಟ ಮಾಡುತ್ತಲೇ ಬಂದ ಹಿನ್ನೆಲೆ ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

ಪ್ರಶಸ್ತಿ ಆಯ್ಕೆ ಸಲುವಾಗಿ ಇತಿಹಾಸ ತಜ್ಞ ಹಾಗೂ ಸಂಶೋಧಕ ಡಾ. ತಲಕಾಡು ಚಿಕ್ಕರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ ಎಂ ಪಟೇಲ್ ಪಾಂಡು ಸಭೆ ನಡೆಸಿ ಮಾಜಿ ಪ್ರಧಾನಿಗಳ ಹೆಸರನ್ನು ಅಂತಿಮಗೊಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X