ಉತ್ತರ ಕನ್ನಡ | ಸಾಲಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನ ಅಪಹರಣ

Date:

Advertisements

ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ.

ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ ಮಾಡುತ್ತಿದ್ದ ಮುಂಡಗೋಡದ ಜಮೀರ್ ದರ್ಗಾವಲೆ ಎಂಬವರನ್ನು ಗುಂಪೊಂದು ಅಪರಿಸಿತ್ತು. ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಜಮೀರ್‌ನನ್ನು ರಕ್ಷಿಸಿದ್ದಾರೆ. ಈವರೆಗೆ 13 ಮಂದಿ ಆರೋಪಿಗಳನ್ನು ಬಂಧಸಿದ್ದಾರೆ.

ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಜಮೀರ್, 1 ಲಕ್ಷ ರೂ. ಸಾಲ ಕೊಟ್ಟು, ತಿಂಗಳಿಗೆ 30,000 ರೂ. ಬಡ್ಡಿಯನ್ನೇ ಪಡೆಯುತ್ತಿದ್ದರು. ಇದು, ಬರೋಬ್ಬರಿ ತಿಂಗಳಿಗೆ 30% ಬಡ್ಡಿಯ ಲೆಕ್ಕವಾಗಿತ್ತು. ಸಾಲ ಕೊಡಲು ಸಾಲಗಾರರಿಂದ ಖಾಲಿ ಚೆಕ್‌ ಪಡೆಯುತ್ತಿದ್ದರು. ಬಡ್ಡಿ ಪಾವತಿಸದಿದ್ದರೆ, ಚೆಕ್‌ ಬೌನ್ಸ್‌ ಕೇಸ್‌ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

Advertisements

ಮೀಟರ್ ಬಡ್ಡಿ ವಸೂಲಿಗಾಗಿಯೇ ಜಮೀರ್ ಸುಮಾರು 150 ಮಂದಿ ಕೆಲಸಗಾರರನ್ನು ಇಟ್ಟುಕೊಂಡಿದ್ದರು. 30%ನಂತೆ ಮೀಟರ್ ಬಡ್ಡಿ ವಸೂಲಿ ಮಾಡುತ್ತಿದ್ದ ಜಮೀರ್, ಬಡ್ಡಿಯ ಹಣದಲ್ಲಿ 15% ತಾನು ಇಟ್ಟುಕೊಂಡು, ಉಳಿದ 15%ಅನ್ನು ವಸೂಲಿ ಮಾಡುತ್ತಿದ್ದ ಕೆಲಸಗಾರರಿಗೆ ಹಂಚುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ, ಉತ್ತರ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಎಂ ನಾರಾಯಣ ನೇತೃತ್ವದಲ್ಲಿ ಪೊಲೀಸರು ಜಮೀರ್ ಮನೆ ಮೇಲೆ ದಾಳಿ ನಡೆಸಿದ್ದರು. ಆ ವೇಳೆ, 250ಕ್ಕೂ ಹೆಚ್ಚು ಖಾಲಿ ಚೆಕ್‌ಗಳು ಪತ್ತೆಯಾಗಿದ್ದವು ಎಂದು ವರದಿಯಾಗಿದೆ.

ಜಮೀರ್ ಅವರ ಮೀಟರ್‌ ಬಡ್ಡಿ ಸುಲಿಗೆಯಿಂದ ಬೇಸತ್ತಿದ್ದ ಗುಂಪೊಂದು ಜನವರಿ 9ರ ರಾತ್ರಿ ಜಮೀರ್ ಅವರನ್ನು ಅಪಹರಿಸಿತ್ತು. ಆತನ ಕುಟುಂಬಸ್ಥರಿಗೆ ಕರೆ ಮಾಡಿ, 32 ಲಕ್ಷ ರೂ.ಗೆ ಬೇಡಿಕೆ ಇಟ್ಟಿತ್ತು. ಆದಾಗ್ಯೂ, ಕುಟುಂಬಸ್ಥರು 18 ಲಕ್ಷ ರೂ.ಗಳನ್ನು ನೀಡಿದ್ದರು. ಬಳಿಕ, ಜಮೀರ್ ಅವರನ್ನು ಹಾವೇರಿಯಲ್ಲಿ ಬಿಟ್ಟು, ಗುಂಪು ಪರಾರಿಯಾಗಿತ್ತು.

ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X