ಕೊಪ್ಪಳ | ಪಾಳು ಬಿದ್ದ ಕಾರ್ಖಾನೆ ಶುಚಿಗೊಳಸಲು ಹೋಗಿ ಕಾರ್ಮಿಕ‌ ಸಾವು

Date:

Advertisements

ಪಾಳು ಬಿದ್ದಿದ್ದ ಕಾರ್ಖಾನೆಯೊಂದನ್ನು ಶುಚಿಗೊಳಿಸಲು ಹೋಗಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಲ್ಲಾನಗರ ನಿವಾಸಿ ಮಾರುತಿ ಕೊರಗಲ್ ಮೃತ ದುರ್ದೈವಿ.

ಗಿಣಿಗೇರಾ ಕೈಗಾರಿಕಾ ಪ್ರದೇಶದಲ್ಲಿರುವ ಕಾಮಿನಿ ಇಸ್ಪಾತ್ ʼಐರನ್ ಅಂಡ್ ಸ್ಪಾಂಜ್‌ʼ ಕಾರ್ಖಾನೆಯು ಕೆಲ ದಿನಗಳಿಂದ ಪಾಳು ಬಿದ್ದಿತ್ತು. ಅದನ್ನು ಶುಚಿಗೊಳಿಸಲು ಮಾರುತಿ ಮುಂದಾಗಿದ್ದಾರೆ. ಆಗ ಪಕ್ಕದಲ್ಲೇ ಸೋರಿಕೆಯಾದ ಕಾರ್ಬನ್ ಮಾನಾಕ್ಸೈಡ್‌ ವಿಷಾನಿಲದಿಂದಾಗಿ ಮಾರುತಿ ಸಾವನ್ನಪ್ಪಿದ್ದು, ಇನ್ನೊಬ್ಬ ಕಾರ್ಮಿಕ ಮಹಾಂತೇಶ ‌ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೇ ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಂದ್ ಆಗಿದ್ದ ಘಟಕದಲ್ಲಿ ಮಾರುತಿ ಮತ್ತು ಮಹಾಂತೇಶ ಕಿರುಚಾಡಿ ಅಸ್ವಸ್ಥರಾಗಿ ಬಿದ್ದಿದ್ದಾರೆ. ಅವರ ಕಿರುಚಾಟ ಕೇಳಿ ಉಳಿದ ಮಂದಿ ಅವರ ರಕ್ಷಣೆಗೆ ಹೋಗಿ ಅವರೂ ಅಸ್ವಸ್ಥರಾದರು ಎಂದು ಅಲ್ಲಿನ ಪ್ರತ್ಯಕ್ಷದರ್ಶಿ ಕಾರ್ಖಾನೆ ಸಿಬ್ಬಂದಿಗಳು ಮಾಧ್ಯಮ ಹೇಳಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಅಗತ್ಯ: ಭಾರದ್ವಾಜ್

“ಕಾರ್ಮಿಕರಿಗೆ ಸುರಕ್ಷಿತ ಸೌಕರ್ಯವಿಲ್ಲದೆ ದುಡಿಸಿಕೊಳ್ಳುತ್ತಿದ್ದಾರೆ. ಪಾಳು ಬಿದ್ದ ಕಾರ್ಖಾನೆ ಸ್ವಚ್ಛಗೊಳಿಸಲು ಕಳಿಸಿ, ಬಡವರ ಜೀವಕ್ಕೆ ಸಂಚಕಾರ ತಂದೊಡ್ಡಿದ್ದಾರೆ. ಇದರ ಹೊಣೆ ಯಾರು ಹೊರುವವರು? ಬಡವರ ಜೀವಕ್ಕೆ ರಕ್ಷಣೆ ಇಲ್ಲವೇ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

Download Eedina App Android / iOS

X