ಕೋಲಾರ | ಶಿಕ್ಷಕಿ ವರ್ಗಾವಣೆ: ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

Date:

Advertisements

ಶಾಲೆಯ ಶಿಕ್ಷಕಿಯನ್ನು ಬೇರೊಂದು ಶಾಲೆಗೆ ನಿಯೋಜನೆ ಮಾಡಿದ್ದನ್ನು ವಿರೋಧಿಸಿ ಗ್ರಾಮಸ್ಥರು ಸರ್ಕಾರಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿರುವ ಕುಂದರಸನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಿದೆ. ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ತರಗತಿಗಳು ನಡೆಯುತ್ತವೆ. ಶಾಲೆಯಲ್ಲಿ ಒಟ್ಟು 32 ಮಂದಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ, ಈ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆಯೇ ಅಲ್ಲಿನ ಖಾಯಂ ಶಿಕ್ಷಕಿಯನ್ನು ನಿಯೋಜನೆ ಮಾಡಲಾಗಿದೆ. ಇದು ಗ್ರಾಮಸ್ಥರನ್ನು ಕೆರಳಿಸಿದೆ.

ಶಾಲೆಯ ಖಾಯಂ ಶಿಕ್ಷಕಿ ಶಾಂತಮ್ಮ ಅವರನ್ನು ಶಿಕ್ಷಣ ಇಲಾಖೆ ನಿಯೋಜನೆ ಮಾಡಿದೆ. ಶಾಲೆಗೆ ಅಥಿತಿ ಶಿಕ್ಷಕರನ್ನು ನಿಯೋಜಿಸಿದೆ. ತಮ್ಮೂರಿನ ಶಾಲೆಗೆ ಅಥಿತಿ ಶಿಕ್ಷಕರು ಬೇಡ, ಪಾಠ ಮಾಡುವುದರಲ್ಲಿ ಅನುಭವಿದ್ದ ಶಾಂತಮ್ಮ ಅವರನ್ನೇ ಮರಳಿ ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisements

ಶಿಕ್ಷಕಿಯ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಸ್ ಸುಕನ್ಯಾ, “ಶೈಕ್ಷಣಿಕ ವರ್ಷ ಆರಂಭವಾದ ಸಮಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆಧಾರದ ಮೇಲೆ ಶಿಕ್ಷಕರನ್ನು ನಿಯೋಜನೆ ಮಾಡುವುದು ಸಹಜ ಪ್ರಕ್ರಿಯೆ. ಶಿಕ್ಷಕಿ ಶಾಂತಮ್ಮ ಅವರು ನಲಿ-ಕಲಿ ತರಬೇತಿ ಪಡೆದಿದ್ದಾರೆ. ಹೀಗಾಗಿ, ಅವರನ್ನು ದೋಣಿಮಡಗು ಶಾಲೆಗೆ ನಿಯೋಜಿಸಲಾಗಿತ್ತು. ಆದರೆ, ಕುಂದರಸನಹಳ್ಳಿ ಗ್ರಾಮಸ್ಥರು ಶಿಕ್ಷಕಿ ಶಾಂತಮ್ಮ ಅವರೇ ತಮ್ಮೂರಿನ ಶಾಲೆಗೆ ನಿಯೋಜಿಸಬೇಕು ಎಂದು ಹಠಕ್ಕೆ ಬಿದ್ದಿದ್ದರಿಂದ, ಅವರನ್ನು ಮತ್ತೆ ಕುಂದರಸನಹಳ್ಳಿ ಶಾಲೆಗೆ ನಿಯೋಜಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X