ವಿಚಿತ್ರ ಘಟನೆ | ಗರ್ಭಿಣಿಯ ಗರ್ಭದಲ್ಲಿದ್ದ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ

Date:

Advertisements

ಗರ್ಭಿಣಿಯ ಗರ್ಭದಲ್ಲಿದ್ದ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ಮತ್ತು ವಿಚಿತ್ರ ಘಟನೆ ಮಹಾರಾಷ್ಟ್ರದ ಬುಲ್ದಾನಾದಲ್ಲಿ ಬೆಳಕಿಗೆ ಬಂದಿದೆ.

32 ವರ್ಷದ ಮಹಿಳೆ ಗರ್ಭಿಣಿಯಾಗಿ 35 ವಾರಗಳು ಕಳೆದಿವೆ. ಅವರು ನಿಯಮಿತಿ ತಪಾಸಣೆಗಾಗಿ ಬುಲ್ದಾನಾ ಜಿಲ್ಲಾ ಮಹಿಳಾ ಆಸ್ಪತ್ರೆಗೆ ತೆರಳಿದ್ದರು. ಮಗುವಿನ ಬೆಳವಣಿಗೆಯನ್ನು ಪರೀಕ್ಷಿಸಲು ‘ಸ್ಯಾನಿಂಗ್’ ಮಾಡಲಾಗಿದ್ದು, ಈ ವೇಳೆ, ಮಗುವಿನ ಹೊಟ್ಟೆಯಲ್ಲಿಯೂ ಭ್ರೂಣ ಇರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಪ್ರಸಾದ್ ಅಗರ್ವಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, “ಭ್ರೂಣದಲ್ಲಿಯೂ ಭ್ರೂಣ ಪತ್ತೆಯಾಗುವುದು ಅಪರೂಪದ ಘಟನೆಯಾಗಿದೆ. ಐದು ಲಕ್ಷ ಮಂದಿಯಲ್ಲಿ ಒಬ್ಬರಲ್ಲಿ ಮಾತ್ರ ಇಂತಹ ಪ್ರಕರಣಗಳು ಕಂಡುಬರುತ್ತವೆ” ಎಂದು ತಿಳಿಸಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ಟ್ರಂಪ್ ಟೀಮ್‌ನಿಂದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಔಟ್ ಆಗಿದ್ದೇಕೆ?

“ಭಾರತದಲ್ಲಿನ 10-15 ಪ್ರಕರಣಗಳು ಸೇರಿದಂತೆ ವಿಶ್ವಾದ್ಯಂತ ಇಂತಹ 200 ಪ್ರಕರಣಗಳು ಈವರೆಗೆ ವರದಿಯಾಗಿವೆ. “ನಾವು ಜಾಗರೂಕನಾಗಿದ್ದರಿಂದ ಮಗುವಿನ ಹೊಟ್ಟೆಯಲ್ಲಿಯೂ ಭ್ರೂಣ ಇರುವ ಅಸಾಮಾನ್ಯ ಸಂಗತಿಯನ್ನು ಗಮನಿಸಿದೆವು” ಎಂದು ಅವರು ವಿವರಿಸಿದ್ದಾರೆ.

“ಎರಡನೇ ಅಭಿಪ್ರಾಯಕ್ಕಾಗಿ ಪ್ರಕರಣವನ್ನು ರೇಡಿಯಾಲಜಿಸ್ಟ್ ಡಾ. ಶ್ರುತಿ ಥೋರಟ್ ಅವರಲ್ಲಿಗೆ ಕಳಿಸಿದ್ದೆವು. ಅವರು ಸುರಕ್ಷಿತ ಹೆರಿಗೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಗರ್ಭಿಣಿಯನ್ನು ನೆರೆಯ ಛತ್ರಪತಿ ಸಂಭಾಜಿನಗರದಲ್ಲಿರುವ ವೈದ್ಯಕೀಯ ಸೌಲಭ್ಯಕ್ಕೆ ಕಳಿಸುವಂತೆ ಸೂಚಿಸಿದ್ದಾರೆ” ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X