ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಸೂಚನೆ

Date:

Advertisements

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಮೈಸೂರು ಅರಣ್ಯ ಭವನದಲ್ಲಿ ಬುಧವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು ಬತ್ತದಂತೆ ಸೌರ ಪಂಪ್ ಸೆಟ್ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಬೇಸಿಗೆಯಲ್ಲಿ ಕಾಡ್ಗಿಚ್ಚು ಅರಣ್ಯ ನಾಶಕ್ಕೆ ಕಾರಣವಾಗುತ್ತದೆ. ಹೀಗಾಗಿ ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗ್ನಿಶಾಮಕ ಉಪಕರಣಗಳ ಸುಸ್ಥಿತಿಯನ್ನು ಖಾತ್ರಿಪಡಿಸಿಕೊಂಡು, ಸಿಬ್ಬಂದಿಯನ್ನು ಸನ್ನದ್ಧವಾಗಿರಬೇಕು” ಎಂದರು.

Advertisements

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಸೂಚನೆ

“ಮೈಸೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದ್ದು, ನಗರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಲೋಟ, ಬ್ಯಾನರ್, ಬಂಟಿಗ್ಸ್ ಸೇರಿದಂತೆ ಯಾವುದೇ ಏಕ ಬಳಕೆ ವಸ್ತು ಮಾರಾಟ, ಸಾಗಾಟ, ದಾಸ್ತಾನಿಗೆ ಅವಕಾಶ ಇಲ್ಲದಂತೆ ನಿಯಮಿತವಾಗಿ ತಪಾಸಣೆ ನಡೆಸಿ ದಂಡ ವಿಧಿಸಬೇಕು ” ಎಂದು ಹೇಳಿದರು.

“ಕಲುಷಿತ ನೀರು ಸೇವಿಸಿ ಯಾರೂ ಅಸ್ವಸ್ಥರಾಗಬಾರದು. ಈ ಹಿನ್ನೆಲೆಯಲ್ಲಿ ನಿಯಮಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ಗಳ ನೀರಿನ ಗುಣಮಟ್ಟ ಪರೀಕ್ಷಿಸಬೇಕು” ಎಂದು ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X