ಚಿಕ್ಕಬಳ್ಳಾಪುರ | ಬಣ ಬಡಿದಾಟಕ್ಕೆ ಕಾರಣವಾದ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ

Date:

Advertisements

ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಬೆನ್ನಲ್ಲೇ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ರಾಜ್ಯ ಬಿಜೆಪಿ ಘಟಕ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷರ ಹೆಸರನ್ನು ಬುಧವಾರ ಪ್ರಕಟಗೊಳಿಸಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದ ಸಂದೀಪ್‌ ಬಿ ರೆಡ್ಡಿಯವರನ್ನು ನೇಮಕ ಮಾಡಿದೆ. ಬಿಜೆಪಿ ಜಿಲ್ಲಾಧ್ಯಕ್ಷರ ರೇಸ್‌ನಲ್ಲಿ ಸಂಸದರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮರಳುಕುಂಟೆ ಕೃಷ್ಣಮೂರ್ತಿ ಪ್ರಬಲ ಆಕಾಂಕ್ಷಿಯಾಗಿದ್ದರು. ಜತೆಗೆ ಪ್ರತಾಪ್‌, ಸೀಕಲ್‌ ರಾಮಚಂದ್ರ ಗೌಡ, ಸಂದೀಪ್‌ ಹಾಗೂ ಎಸ್‌ಆರ್‌ಎಸ್‌ ದೇವರಾಜು ಸಹ ರೇಸ್‌ನಲ್ಲಿ ಇದ್ದರು. ಆದರೆ, ಇವರೆಲ್ಲರಿಗೂ ಸೆಡ್ಡುಹೊಡೆದು ಸಂದೀಪ್‌ ಬಿ ರೆಡ್ಡಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ರಾಜ್ಯ ಸಮಿತಿ ನೇಮಿಸಿದೆ.

IMG 20250129 WA0010

ಜಿಲ್ಲಾಧ್ಯಕ್ಷರ ನೇಮಕಾತಿಯ ಬಳಿಕ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಇತರೆ ಆಕಾಂಕ್ಷಿಗಳು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಖಂಡಿಸಿ ಬಿಜೆಪಿ ಕಚೇರಿಯಲ್ಲೇ ಧಿಕ್ಕಾರ ಕೂಗಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮರಳುಕುಂಟೆ ಕೃಷ್ಣಮೂರ್ತಿ ಹಾಗೂ ಅವರ ಬಣ ನೂತನ ಜಿಲ್ಲಾಧ್ಯಕ್ಷರ ಸುದ್ದಿಗೋಷ್ಠಿಯ ನಡುವೆಯೇ ಬಿಜೆಪಿ ಕಚೇರಿಗೆ ನುಗ್ಗಿ ಧಿಕ್ಕಾರ ಕೂಗಿದ್ದಾರೆ.

Advertisements

ಮತ್ತೊಬ್ಬ ಪ್ರಬಲ ಆಕಾಂಕ್ಷಿಯಾಗಿದ್ದ ಎಸ್‌ಆರ್‌ಎಸ್‌ ದೇವರಾಜು, ನಾನೂ ಸಹ ಹತ್ತಲವು ವರ್ಷಗಳಿಂದ ಪಕ್ಷ ಸಂಘಟನೆಗಾಗಿ ದುಡಿದಿದ್ದೇನೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಸಹ ಪ್ರಬಲ ಆಕಾಂಕ್ಷಿ. ಹಿರಿತನದ ಆಧಾರದಲ್ಲಿ ಜಿಲ್ಲಾಧ್ಯಕ್ಷ ಪಟ್ಟ ನನಗೆ ಸಿಗಬೇಕು. ಹಿಂದುಳಿದ ಸಮುದಾಯದವನೆಂಬ ಕಾರಣಕ್ಕೆ ನನ್ನನ್ನು ಪಟ್ಟಿಯಿಂದ ಕೈಬಿಡುವ ಹುನ್ನಾರ ಮಾಡಿದ್ದಾರೆ ಎಂದು ಇತ್ತೀಚೆಗಷ್ಟೇ ಮಾಧ್ಯಮಗಳೊಂದಿಗೆ ಅಸಮಾಧಾನ ಹೊರಹಾಕಿದ್ದರು.

IMG 20250129 WA0014

ವಿಜಯೇಂದ್ರ ವಿರುದ್ಧ ಸಂಸದ ಸುಧಾಕರ್‌ ವಾಗ್ದಾಳಿ :
ನೂತನ ಜಿಲ್ಲಾಧ್ಯಕ್ಷರ ನೇಮಕದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಂಸದ ಡಾ.ಕೆ.ಸುಧಾಕರ್‌, ನನ್ನನ್ನು ರಾಜಕೀಯವಾಗಿ ಮುಗಿಸಲು ವಿಜಯೇಂದ್ರ ಯೋಜನೆ ರೂಪಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಸದ ಸುಧಾಕರ್‌

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ನನ್ನ ರಾಜಕೀಯವನ್ನೇ ಪಣಕ್ಕಿಟ್ಟು ಬಿಜೆಪಿಗೆ ಬಂದೆ. ಹಾಗಿದ್ದರೂ ವಿಜಯೇಂದ್ರ ನನ್ನ ಕ್ಷೇತ್ರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಈ ವಿಚಾರವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ತಿಳಿಸಿದ್ದೇನೆ. ಇವರ ನಡೆಯಿಂದ ನಮ್ಮ ಮುಖಂಡರಿಗೆ ನೋವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಯಾರನ್ನೂ ವಿಶ್ವಾಸಕ್ಕೆ ಪಡೆಯುವ ಗುಣ ಇವರಿಗೆ ಇಲ್ಲ. ವಿಜಯೇಂದ್ರ ಈಗಾಗಲೇ ಮುಖ್ಯಮಂತ್ರಿ ಆಗಿದ್ದೇನೆ ಎಂಬ ಭಾವನೆಯಲ್ಲಿದ್ದಾರೆ. ದರ್ಪ, ಅಹಂಕಾರ ಹೆಚ್ಚಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಶರ್ಜೀಲ್- ಉಮರ್ ಗೆ ಜಾಮೀನು; ಅಗೋಚರ ಕದಗಳ ಮೇಲೆ ‘ನಾಳೆ ಬಾ’ ಎಂದು ನ್ಯಾಯಾಂಗ ಬರೆದ ಬರೆಹ!

ಚುನಾವಣೆಯಲ್ಲಿ ನನ್ನ ವಿರುದ್ದ ಕೆಲಸ ಮಾಡಿದವರನ್ನೇ ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಯಾವ ಹಿರಿಯರೂ ನಿಮಗೆ ಬೇಕಾಗಿಲ್ಲ. ಭಿನ್ನಾಭಿಪ್ರಾಯಗಳಿದ್ದರೂ ಮಾಧ್ಯಮದ ಮುಂದೆ ಹೋಗಿರಲಿಲ್ಲ. ಆದರೀಗ ಅನಿವಾರ್ಯವಾಗಿ ಬಂದಿದ್ದೇನೆ. ತಾಕತ್ತಿದ್ದರೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಂದು ಪಕ್ಷ ಕಟ್ಟಲಿ ಎಂದು ಸವಾಲು ಹಾಕಿದ್ದಾರೆ.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X