ಉಡುಪಿ | ಸರಣಿ ಅಪಘಾತ, ಮಗಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

Date:

Advertisements

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66 ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಉಡುಪಿ ಕಡೆ ಸಾಗುವ ಹೆದ್ದಾರಿ ಮಧ್ಯೆ ಪಲ್ಟಿಯಾಗಿದೆ. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ತಲುಪಿಸಿ, ಕಾಪು ಚಂದ್ರನಗರ ಕಡೆ ಸಾಗುತ್ತಿದ್ದ ಕ್ರೆಸೆಂಟ್ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಾಹನ ಡಿವೈಡ‌ರ್ ದಾಟಿ ಮಂಗಳೂರು ಕಡೆ ಸಾಗುವ ಹೆದ್ದಾರಿಯಲ್ಲಿ ಮುಗುಚಿ ಬಿದ್ದಿದೆ. ಇದೇ ಸಂದರ್ಭ ಮಂಗಳೂರು ಕಡೆ ಸಾಗುತ್ತಿದ್ದ ಇನ್ನೋವಾ ಕಾರಿಗೂ ಮತ್ತೊಂದು ಕಾರು ಡಿಕ್ಕಿಯಾಗಿದೆ.

Advertisements

ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಾಹನ ಡಿವೈಡ‌ರ್ ದಾಟಿ ಮಂಗಳೂರು ಕಡೆ ಸಾಗುವ ಹೆದ್ದಾರಿಯಲ್ಲಿ ಮುಗುಚಿ ಬಿದ್ದಿದೆ. ಇದೇ ಸಂದರ್ಭ ಮಂಗಳೂರು ಕಡೆ ಸಾಗುತ್ತಿದ್ದ ಇನ್ನೋವಾ ಕಾರಿಗೂ ಮತ್ತೊಂದು ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ 3 ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುವ ಸಮಯ ಶಾಲಾ ಬಸ್ ನಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ಟೋಲ್ ಸಿಬ್ಬಂದಿ ಕ್ರೇನ್ ಮೂಲಕ ಬಸ್ಸನ್ನು ಮೇಲೆತ್ತುವಲ್ಲಿ ಸಹಕರಿಸಿದರು.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X