ಬೀದರ್‌ | ಕನಿಷ್ಠ ಬೆಂಬಲ ಬೆಲೆಗೆ ಕಡಲೆ ಕಾಳು ಖರೀದಿ : ಕ್ವಿಂಟಾಲ್‌ಗೆ 5,650 ದರ ನಿಗದಿ

Date:

Advertisements

ಕಡಲೆ ಕಾಳು ಖರೀದಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

2024-25ನೇ ಸಾಲಿಗೆ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಪ್ರತಿ ಕ್ವಿಂಟಾಲಿಗೆ ₹5,650 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜ.28ರಂದು ನಡೆದ ಸಭೆಯ ನಡವಳಿಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 85 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಎಂಎಸ್‌ಪಿ ದರದಲ್ಲಿ ರೈತರಿಂದ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

Advertisements

ರಾಜ್ಯ ಸರ್ಕಾರದ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 20 ಕ್ವಿಂಟಾಲ್‌ನಂತೆ ಈಂಕಿ ಗುಣಮಟ್ಟದ ಕಡಲೆ ಕಾಳು ಮಾರಾಟ ಮಾಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗೂಡ್ಸ್‌ ವಾಹನ – ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಖರೀದಿ ಕೇಂದ್ರಗಳು ಲಾಗಿನ್ ಕ್ರೆಡೆನ್ಸಿಯಲ್ಸ್‌ ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ಕಡಲೆಕಾಳು ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಡಲೆ ಮಾರಾಟ ಮಾಡುವ ಮೂಲಕ ಈ ಯೋಜನೆ ಲಾಭ ಪಡೆದುಕೊಳ್ಳಲು ಜಿಲ್ಲಾಡಳಿತ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X