ಆಘಾತಕಾರಿ ಘಟನೆ | ಒಂದು ಕೋಟಿ ರೂ. ಇನ್ಶುರೆನ್ಸ್‌ ಹಣಕ್ಕಾಗಿ ತಂಗಿಯನ್ನೇ ಕೊಂದ ಅಣ್ಣ

Date:

Advertisements

ಯುವತಿಯ ಹೆಸರಿನಲ್ಲಿ ಮಾಡಿಸಲಾಗಿದ್ದ ಇನ್ಶುರೆನ್ಸ್‌ನಿಂದ ಹಣ ಪಡೆಯುವುದಕ್ಕಾಗಿ ಯುವಕನೊಬ್ಬ ಆಕೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ರಿಯಲ್ ಎಸ್ಟೇಟ್‌ ಉದ್ಯಮಿ ಎಂದು ಹೇಳಲಾಗಿದೆ.

ಆರೋಪಿ ಅಶೋಕ್ ರೆಡ್ಡಿಯ ತಂಗಿ ಹೆಸರಿನಲ್ಲಿ 1 ಕೋಟಿ ರೂ. ಮೌಲ್ಯದ ವಿಮೆ ಮಾಡಿಸಲಾಗಿತ್ತು. ಆ ವಿಮೆ ಹಣವನ್ನು ಪಡೆಯುವುದಕ್ಕಾಗಿ ತಂಗಿಯನ್ನೇ ಅಶೋಕ್‌ ರೆಡ್ಡಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಆಶೋಕ್ ರೆಡ್ಡಿಯ ತಂಗಿಗೆ ವಿವಾಹವಾಗಿದ್ದು, ಗಂಡನಿಂದ ದೂರು ಉಳಿದಿದ್ದರು. ವಿಚ್ಛೇದನ ಪಡೆದಿದ್ದರು. ಮಕ್ಕಳೂ ಇಲ್ಲದ ಕಾರಣ ಏಕಾಂಗಿ ಜೀವನ ನಡೆಸುತ್ತಿದ್ದರು. ಅವರ ಜೀವನ ನಿರ್ವಹಣೆಗೆ ಅಶೋಕ್ ರೆಡ್ಡಿ ಸಹಾಯ ಮಾಡಿದ್ದ ಎಂದು ಹೇಳಲಾಗಿದೆ.

ಸಾಲಬಾಧೆಗೆ ಸಿಲುಕಿದ್ದ ಅಶೋಕ್ ರೆಡ್ಡಿ, ತನ್ನ ತಂಗಿಯನ್ನು ಕೊಂದು ವಿಮೆ ಹಣವನ್ನು ಪಡೆಯಲು ಸಂಚು ರೂಪಿಸಿದ್ದನು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪವೊಡ್ಡಿ ತನ್ನ ಕಾರಿನಲ್ಲಿ ಕೊರೆದೊಯ್ದಿದ್ದಾನೆ. ಆಸ್ಪತ್ರೆಯಲ್ಲಿ ತಪಾಸಣೆ ಮುಗಿಸಿ, ಹಿಂದಿರುಗುವಾಗ ಆಕೆಗೆ ನಿದ್ರೆ ಮಾತ್ರೆಗಳನ್ನು ಕೊಟ್ಟು, ಹತ್ಯೆಗೈದಿದ್ದಾರೆ. ಪ್ರಕರಣವನ್ನು ಅಪಘಾತವೆಂದು ಬಿಂಬಿಸಲು ಕೂಡ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣದ ಸತ್ಯಾಸತ್ಯೆತೆಯನ್ನು ಬೇಧಿಸಿದ್ದಾರೆ. ಆಶೋಕ್ ರೆಡ್ಡಿಯೇ ಆಕೆಯನ್ನು ಕೊಲೆ ಮಾಡಿದ್ಧಾನೆ ಎಂದು ಕಂಡುಹಿಡಿದಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ), 302, ಮತ್ತು 201 ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X