ಮಧ್ಯಾಹ್ನದ ಬಿಸಿಯೂಟ | ಮೊಟ್ಟೆ, ಸಿಹಿಗೆ ಹಣ ನೀಡಲ್ಲ ಎಂದ ಮಹಾರಾಷ್ಟ್ರ ಸರ್ಕಾರ

Date:

Advertisements

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುತ್ತಿದ್ದ ಮೊಟ್ಟೆ ಮತ್ತು ಸಿಹಿ ತಿನಿಸಿಗೆ ಈವರೆಗೆ ನೀಡುತ್ತಿದ್ದ ಹಣವನ್ನು ಇನ್ನು ಮುಂದೆ ನೀಡದಿರಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

ಶಾಲೆಯ ಆಡಳಿತ ಮಂಡಳಿಯು ಬೇರೆ ಎಲ್ಲಿಂದಾದರೂ ನಿಧಿ ವ್ಯವಸ್ಥೆ ಮಾಡಿದರೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ, ಸಿಹಿ ತಿನಿಸು (ಪಾಯಸ ಅಥವಾ ರಾಗಿ) ನೀಡಬಹುದು ಎಂದು ಸರ್ಕಾರ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ದಾವಣಗೆರೆ | ಬಿಸಿಯೂಟ ತಯಾರಕರ ಕನಿಷ್ಟ ವೇತನ ಜಾರಿಗೆ ಒತ್ತಾಯ

Advertisements

1995ರಲ್ಲಿ ಜಾರಿಯಾದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಭಾಗವಾಗಿ ಮೊಟ್ಟೆ, ಬಾಳೆಹಣ್ಣು, ಮೊದಲಾದ ಪೌಷ್ಠಿಕಾಂಶಯುತ ಆಹಾರವನ್ನು ನೀಡಲಾಗುತ್ತದೆ. ಸರಿಸುಮಾರು 450 ಗ್ರಾಂ ಕ್ಯಾಲೋರಿ ಮತ್ತು 8ರಿಂದ 12 ಗ್ರಾಂ ಪ್ರೋಟಿನ್‌ಯುಕ್ತ ಆಹಾರವನ್ನು ಮಕ್ಕಳಿಗೆ ನೀಡಬೇಕು ಎಂಬುದು ಈ ಯೋಜನೆಯ ಉದ್ದೇಶವಾಗಿದೆ.

2023ರ ನವೆಂಬರ್‌ನಲ್ಲಿ ಮಹಾರಾಷ್ಟ್ರ ಸರ್ಕಾರವು ವಿದ್ಯಾರ್ಥಿಗಳಿಗೆ ಮೊಟ್ಟೆ ಪುಲಾವ್, ಮೊಟ್ಟೆ ಬಿರಿಯಾನಿ, ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ಅಥವಾ ಇತರೆ ಸ್ಥಳೀಯ ಹಣ್ಣುಗಳನ್ನು ಮಧ್ಯಾಹ್ನದ ಬಿಸಿಯೂಟದಲ್ಲಿ ನೀಡಲಾಗುವುದು ಎಂದು ಘೋಷಿಸಿತ್ತು. ಆದರೆ ಹಿಂದುತ್ವ ಸಂಘಟನೆಗಳು ಇದರ ವಿರುದ್ಧವಾಗಿ ಪ್ರತಿಭಟನೆ ನಡೆಸಿತ್ತು. ಕೆಲವು ಶಾಲೆಗಳಲ್ಲಿ ಶೇಕಡ 40ರಷ್ಟು ಪೋಷಕರು ಮೊಟ್ಟೆ ನೀಡುವುದನ್ನು ವಿರೋಧಿಸಿದರು.

ಇದನ್ನು ಓದಿದ್ದೀರಾ? ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

ಈ ಎಲ್ಲಾ ಬೆಳವಣಿಗೆ ಬಳಿಕ ಈಗ ಮಹಾಯುತಿ ಸರ್ಕಾರ ತನ್ನ ಆದೇಶದಿಂದ ತಾನೇ ನುಣುಚಿಕೊಳ್ಳುತ್ತಿದೆ. ಮೊಟ್ಟೆ ನೀಡಲಾಗದು ಎಂದು ನೇರವಾಗಿ ಹೇಳದೆ, ನಿಧಿ ನೀಡುವುದಿಲ್ಲ ಎಂದಿದೆ. ಭಾರತ ಪ್ರಜಾಪ್ರಭುತ್ವ ದೇಶ. ಪ್ರಜಾಪ್ರಭುತ್ವವು ಎಂದಿಗೂ ಬಹುಮತದ ಆಧಾರದಲ್ಲಿ ನಡೆಯುತ್ತದೆ. ಆದರೆ ಮೊಟ್ಟೆ ಬೇಕು ಎಂಬ ಶೇಕಡ 60ರಷ್ಟು ಪೋಷಕರ ಬೇಡಿಕೆಯನ್ನು ಬದಿಗೊತ್ತಿ ಶಾಲೆಯನ್ನು ಮೊಟ್ಟೆ ನೀಡುವುದನ್ನು ವಿರೋಧಿಸಿದ ಶೇಕಡ 40ರಷ್ಟು ಮಂದಿಗೆ ಮಣೆ ಹಾಕಿದೆ. ಪೌಷ್ಠಿಕಾಂಶ ಆಹಾರ ಪಡೆಯುವುದು ಮಕ್ಕಳ ಹಕ್ಕು, ಆದರೆ ಹಕ್ಕನ್ನು ಸರ್ಕಾರವೇ ಕಿತ್ತುಕೊಳ್ಳುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X