ಕೇಂದ್ರ ಬಜೆಟ್ ಅಧಿವೇಶನ | ವಕ್ಫ್‌ ಸೇರಿ ಒಟ್ಟು 16 ಮಸೂದೆ ಮಂಡನೆ ಸಾಧ್ಯತೆ

Date:

Advertisements

ವಕ್ಫ್ ತಿದ್ದುಪಡಿ ಮಸೂದೆ, ಹಣಕಾಸು ಮಸೂದೆ, ಭಾರತೀಯ ರೈಲ್ವೆ ಮತ್ತು ಭಾರತೀಯ ರೈಲ್ವೆ ಬೋರ್ಡ್ ಆಕ್ಟ್ ವಿಲೀನಗೊಳಿಸುವ ಮಸೂದೆ ಸೇರಿದಂತೆ ಒಟ್ಟು 16 ಮಸೂದೆಗಳನ್ನು 2025-26ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಬಜೆಟ್ ಅಧಿವೇಶನವು ಶುಕ್ರವಾರ (ಜನವರಿ 31) ಆರ್ಥಿಕ ಸಮೀಕ್ಷೆ ಮಂಡನೆ ಮಾಡುವ ಮೂಲಕ ಆರಂಭವಾಗಲಿದೆ. ಫೆಬ್ರವರಿ ಒಂದರಂದು ವಿತ್ತ ಸಚಿವೆ ಬಜೆಟ್ ಮಂಡಿಸಲಿದ್ದಾರೆ.

ವಿಪತ್ತು ನಿರ್ವಹಣಾ ಕಾನೂನಿನಲ್ಲೂ ತಿದ್ದುಪಡಿ ತರುವ ನಿರೀಕ್ಷೆಯಿದೆ. ವಾಯುಯಾನ ವಲಯಕ್ಕೆ ಸಂಬಂಧಿಸಿದಂತೆ ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡುವ, ವಲಸೆ ಮತ್ತು ವಿದೇಶಿಯರ ಪ್ರವೇಶಕ್ಕೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸುವ ಮಸೂದೆಯನ್ನು ಈ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಠ ಪಂಗಡಗಳ ಪ್ರಾತಿನಿಧ್ಯಕ್ಕೆ ಮರು ಹೊಂದಾಣಿಕೆ ಮಾಡುವ ಮತ್ತೊಂದು ಮಸೂದೆ ಮಂಡಿಸುವ ಸಾಧ್ಯತೆಯಿದೆ. ಹೆಸರೇ ಸೂಚಿಸುವಂತೆ ಪರಿಶಿಷ್ಠ ಪಂಗಡಕ್ಕೆ ವಿಧಾನಸಭೆ ಸ್ಥಾನಗಳನ್ನು ಮರುಹಂಚಿಕೆ ಮಾಡುವ ಮಸೂದೆ ಇದಾಗಿದೆ.

Advertisements

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ ಅಧಿವೇಶನ | ಸಂಸತ್ತನ್ನೇ ಚುನಾವಣಾ ಭಾಷಣದ ವೇದಿಕೆ ಮಾಡಿಕೊಂಡ ಪ್ರಧಾನಿ ಮೋದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ. ಮೊರಾರ್ಜಿ ದೇಸಾಯಿಯವರು ಒಟ್ಟು ಹತ್ತು ಬಾರಿ ಬಜೆಟ್ ಮಂಡಿಸಿದ್ದು, ಅದಕ್ಕಿಂತ ಎರಡು ಹೆಜ್ಜೆ ಹಿಂದೆ ನಿರ್ಮಲಾ ಇದ್ದಾರೆ.

ವಕ್ಫ್‌ನಲ್ಲಿ ಸುಮಾರು 44 ಬದಲಾವಣೆಗಳನ್ನು ಪ್ರಸ್ತಾಯಿಸುವ ವಿವಾದಾತ್ಮಕ ವಕ್ಫ್ ಮಸೂದೆಯನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಲಿದ್ದಾರೆ. ಈ ವಿವಾದಾತ್ಮಕ ಮಸೂದೆ ವಿರುದ್ಧ ಈಗಾಗಲೇ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದೆ. ಆದರೂ ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಮಿತಿ ಶಿಫಾರಸಿನಂತೆ ಕಾನೂನಿನಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಮುಂದಾಗಿದೆ.

ಇನ್ನು ಹೊಸ ನೇರ ತೆರಿಗೆ ಸಂಹಿತೆ ಸೇರಿದಂತೆ ಪ್ರಸ್ತುತ ಜಾರಿಯಲ್ಲಿರುವ ಆದಾಯ ತೆರಿಗೆ ನಿಯಮ 1961ರಲ್ಲಿ ಬದಲಾವಣೆ ತರುವಂತಹ ಹಣಕಾಸು ಮಸೂದೆಯನ್ನೂ ಕೂಡಾ ಕೇಂದ್ರ ವಿತ್ತ ಸಚಿವೆ ಈ ಬಜೆಟ್‌ನಲ್ಲಿ ಮಂಡಿಸುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X