ಕೊಪ್ಪಳ | ಕಾಮಿನಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಉತ್ಪಾದನೆ ಕೆಲಸ ಸ್ಥಗಿತಕ್ಕೆ ಸೂಚನೆ

Date:

Advertisements

ಕೊಪ್ಪಳ ತಾಲೂಕಿನ ಗಿಣಿಗೇರಿ, ಅಲ್ಲಾನಗರ ಸಮೀಪದಲ್ಲಿರುವ ಕಾಮಿನಿ ಕಬ್ಬಿಣ ಮತ್ತು ಸ್ಟೀಲ್‌ ಕಾರ್ಖಾನೆಯಲ್ಲಿ(ಹೊಸಪೇಟೆ ಇನ್ಸಾತ್) ಅನಿಲ ಸೋರಿಕೆಯಿಂದ ನಡೆದ ಅವಘಡದ ಪ್ರದೇಶಕ್ಕೆ ಕಾರ್ಖಾನೆ ಮತ್ತು ಬಾಯ್ದರುಗಳ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ತಾತ್ಕಾಲಿಕವಾಗಿ ಉತ್ಪಾದನಾ ಕೆಲಸ ಸ್ಥಗಿತ ಮಾಡುವಂತೆ ಸೂಚಿಸಿದ್ದಾರೆ.

ಕಾರ್ಖಾನೆಯ ಒಂದನೇ ಘಟಕದಲ್ಲಿ ಜನವರಿ 16ರಿಂದ ನಿರ್ವಹಣೆ ಕಾರ್ಯ ನಡೆಯುತ್ತಿದ್ದು, ಕೊನೆಯ ಹಂತದ ಕೆಲಸ‌ ನಡೆಯುವಾಗಲೇ ಅವಘಡ ಸಂಭವಿಸಿದೆ. ಕಾರ್ಬನ್ ಮೊನಾಕ್ಸೈಡ್ ಅನಿಲ ಸೋರಿಕೆಯಿಂದ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕೆ ಎಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ ಒಂಬತ್ತು ಮಂದಿ ಕಾರ್ಮಿಕರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

“ಕಾರ್ಖಾನೆ ಮತ್ತು ಬಾಯ್ದರುಗಳ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ತನಿಖೆ ಮಾಡಿದ್ದಾರೆ. ಕಾರ್ಖಾನೆಯಲ್ಲಿನ ಸುರಕ್ಷತೆಯ ಕುರಿತು ಕ್ರಮ ತೆಗೆದುಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲು ಕಾರ್ಖಾನೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಸುರಕ್ಷತಾ ಆಡಿಟ್ ಮಾಡಿಸಿ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸಿದ್ದು, ಅಲ್ಲಿಯ ತನಕ ಕಾರ್ಖಾನೆಯಲ್ಲಿ ಎಲ್ಲ ಉತ್ಪಾದನಾ ಕೆಲಸ ಸ್ಥಗಿತಗೊಳಿಸಬೇಕು” ಎಂದು ನಿರ್ದೇಶನ ನೀಡಿದ್ದಾರೆ.

Advertisements

ಕಾರ್ಮಿಕ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಮೃತ ಕಾರ್ಮಿಕನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ದೊರಕಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಆರೋಗ್ಯ ಮತ್ತು ಕಾರ್ಖಾನೆಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದೆ’ ಎಂದು ಕಾರ್ಖಾನೆಗಳು, ಬಾಯ್ದರುಗಳು, ಸುರಕ್ಷತಾ ಮತ್ತು ಸ್ವಾಸ್ಥ್ಯ ಇಲಾಖೆಯ ಹುಬ್ಬಳ್ಳಿ ವಲಯದ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ ಎನ್ ರಾಠೋಡ್ ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಯಮನೂರ ಬೆಣಕಲ್, ವಿರೂಪಾಕ್ಷಿ ಮೋರನಾಳ, ಹಾಲಪ್ಪ ಈಳಿಗೇರ, ಕನರಾಯ ಬಗನಾಳ, ಜಾರ್ಖಂಡ್‌ನ ರೋಯಾ ಬಗುಂಗಾ, ಆಂಧ್ರದ ಶಿವಕುಮಾರ ಕುಲಶ, ಮಹಾರಾಷ್ಟ್ರದ ಕಮಲೇಶಸಿಂಗ್, ಗಿಣಿಗೇರಿಯ ಸುರೇಶ ಚೌವಾಣ್, ಹಗರಿಬೊಮ್ಮನಹಳ್ಳಿಯ ನಾಗರಾಜ, ಗಂಗಾವತಿ ತಾಲೂಕಿನ ದಾಸನಾಳದ ಮಹಾಂತೇಶ ಅಸ್ವಸ್ಥಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ : ಜಿಲ್ಲಾಧಿಕಾರಿ ಮನವಿ

ಕಾರ್ಖಾನೆ ನಿರ್ವಹಣೆ ಮಾಡುವವರ ನಿರ್ಲಕ್ಷ್ಯದಿಂದಲೇ ದುರ್ಘಟನೆ ಸಂಭವಿಸಿದೆಯೆಂದು ಮಂಗಳವಾರ ಮೃತಪಟ್ಟ ಮಾರುತಿ ಕೊರಗಲ್ ಅವರ ಸಹೋದರ ವೀರೇಶ್ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಕಂಪೆನಿಯ ಸೈಟ್ ವ್ಯವಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ, ಆಪರೇಷನ್ ಮತ್ತು ನಿರ್ವಹಣಾ ಮಾಲೀಕರು, ಕಾರ್ಖಾನೆ ಮಾಲೀಕರು ಹಾಗೂ ಹೊಸಪೇಟೆ ಇಸ್ಪಾತ್ ಕಂಪನಿಯ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಅವರ ಹೆಸರುಗಳನ್ನು ಉಲ್ಲೇಖಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X