‘ಲಿವ್-ಇನ್’ ಸಂಬಂಧವನ್ನೂ ನೋಂದಾಯಿಸಬೇಕು: ಕೋರ್ಟ್‌ ಆದೇಶ

Date:

Advertisements

‘ಲಿವ್-ಇನ್’ ಸಂಬಂಧಗಳನ್ನು ಕೂಡ ನೋಂದಾಯಿಸಿಕೊಳ್ಳಬೇಕು. ಅದಕ್ಕಾಗಿ, ಹೊಸ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಬೇಕು ಎಂದು ರಾಜಸ್ಥಾನ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಕ್ಷಣೆ ಕೋರಿ ಹಲವಾರು ‘ಲಿವ್-ಇನ್ ಸಂಬಂಧ’ದಲ್ಲಿರುವ ಸಂಗಾತಿಗಳು ಅಲ್ಲಿಸಿದ್ದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್‌ ನ್ಯಾಯಮೂರ್ತಿ ಅನ್ನಪ್ ಕುಮಾರ್ ಧಂಡ್ ಅವರಿದ್ದ ಏಕ ಸದಸ್ಯ ಪೀಠವು ವಿಚಾರಣೆ ನಡೆಸಿದೆ. “ಲಿವ್-ಇನ್‌ ಸಂಬಂಧಕ್ಕೆ ರಕ್ಷಣೆ ಕೊಡುವ ಕಾನೂನು ಜಾರಿಗೆ ಬರುವವರೆಗೆ, ಲಿವ್-ಇನ್ ಸಂಬಂಧಗಳನ್ನು ಸಕ್ಷಮ ಪ್ರಾಧಿಕಾರ/ನ್ಯಾಯಮಂಡಳಿಯಲ್ಲಿ ನೋಂದಾಯಿಸಬೇಕು” ಎಂದು ಹೇಳಿದೆ.

“ಹಲವಾರು ದಂಪತಿಗಳು ‘ಲಿವ್-ಇನ್’ ಸಂಬಂಧದಲ್ಲಿ ವಾಸಿಸುತ್ತಿದ್ದಾರೆ. ಅವರ ಸಂಬಂಧದ ಸ್ಥಿತಿಗೆ ಮಾನ್ಯತೆ ದೊರೆಯದ ಕಾರಣ, ಅವರು ತಮ್ಮ ಕುಟುಂಬಗಳು ಮತ್ತು ಸಮಾಜದಿಂದ ಬೆದರಿಕೆ, ಅಪಾಯಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ, ಅವರು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ರಕ್ಷಣೆ ಕೋರಿ 226ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸುತ್ತಿದ್ದಾರೆ. ಪರಿಣಾಮವಾಗಿ, ನ್ಯಾಯಾಲಯಗಳು ಅಂತಹ ಅರ್ಜಿಗಳು ಹೆಚ್ಛಾಗಿ ತುಂಬುತ್ತಿವೆ” ಎಂದು ಪೀಠ ಗಮನಿಸಿದೆ.

Advertisements

“ಲಿವ್-ಇನ್ ಸಂಬಂಧದ ಕಲ್ಪನೆಯು ವಿಶಿಷ್ಟ ಮತ್ತು ಆಕರ್ಷಕವಾಗಿ ಕಾಣಿಸಬಹುದು. ಆದರೆ, ವಾಸ್ತವದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳು ಮತ್ತು ಸವಾಲುಗಳಿವೆ. ಈ ಸಂಬಂಧದಲ್ಲಿ ಮಹಿಳೆಯ ಸ್ಥಾನಮಾನವು ಹೆಂಡತಿಯ ಸ್ಥಾನಮಾನವಲ್ಲ. ಸಾಮಾಜಿಕ ಅನುಮೋದನೆ ಅಥವಾ ಪವಿತ್ರತೆಯನ್ನು ಹೊಂದಿರುವುದಿಲ್ಲ” ಎಂದು ನ್ಯಾಯಮೂರ್ತಿ ಅನ್ನಪ್ ಕುಮಾರ್ ಹೇಳಿದ್ದಾರೆ.

“ಲಿವ್-ಇನ್-ಸಂಬಂಧದ ಒಪ್ಪಂದವನ್ನು ಸಕ್ಷಮ ಪ್ರಾಧಿಕಾರ/ನ್ಯಾಯಮಂಡಳಿಯಲ್ಲಿ ನೋಂದಾಯಿಸಬೇಕು. ಇದಕ್ಕೆ ಅಗತ್ಯ ವೆಬ್‌ ಪೋರ್ಟಲ್‌ಅನ್ನು ಸರ್ಕಾರ ಸ್ಥಾಪಿಸಬೇಕು. ಸಕ್ಷಮ ಪ್ರಾಧಿಕಾರವು ಲಿವ್‌-ಇನ್ ಸಂಬಂಧದ ದಂಪತಿಗಳು ಮತ್ತು ಅವರಿಂದ ಜನಿಸುವ ಮಕ್ಕಳ ಕುಂದುಕೊರತೆಗಳನ್ನು ಪರಿಹರಿಸುವ ಕಾರ್ಯವನ್ನೂ ಮಾಡಬೇಕು” ಎಂದು ಕೋರ್ಟ್‌ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X