ಗಾಂಧಿ ಕೊಲೆ ಸಂಭ್ರಮಿಸಿ, ಗೋಡ್ಸೆಗೆ ಜೈಕಾರ ಕೂಗಿದ ಹಿಂದು ಮಹಾಸಭಾ

Date:

Advertisements

ಜನವರಿ 30 ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮ ದಿನ. ದೇಶಾದ್ಯಂತ ಗಾಂಧಿ ಹುತಾತ್ಮ ದಿನವನ್ನು ಅಚರಿಸಲಾಗುತ್ತಿರುವ ಸಮಯದಲ್ಲೇ, ಹಿಂದು ಮಹಾಸಭಾ ಗಾಂಧಿ ಕೊಲೆಯ ಸಂಭ್ರಮಾಚರಣೆ ಮಾಡಿದೆ. ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಗೆ ಜೈಕಾರ ಕೂಗಿ, ಸಂಭ್ರಮಿಸಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿನ ‘ಅಮರ ಹುತಾತ್ಮ ನಾಥೂರಾಮ್ ಗೋಡ್ಸೆ ನಾನಾ ಅಪ್ಟೆ ಧಾಮ’ದಲ್ಲಿ ಹಿಂದು ಮಹಾಸಭಾದ ಮುಖಂಡರು ಮತ್ತು ಕಾರ್ಯಕರ್ತರು ಗಾಂಧಿ ಅವರ ಕೊಲೆಯನ್ನು ಸಂಭ್ರಮಿಸಿದ್ದಾರೆ. ಗಾಂಧಿ ಅವರನ್ನು ಹತ್ಯೆಗೈದ ಹಂತ ಗೋಡ್ಸೆಯನ್ನು ಹೊಗಳಿ, ಜೈಕಾರ ಕೂಗಿದ್ದಾರೆ.

ಹಿಂದು ಮಹಾಸಭಾದ ನಾಯಕ, ನಾನಾ ಅಪ್ಟೆ ಧಾಮದ ಸಂಸ್ಥಾಪಕ ಪಂಡಿತ್ ಅಶೋಕ್ ಶರ್ಮಾ ನೇತೃತ್ವದಲ್ಲಿ ಗಾಂಧಿ ಹಂತಕ ಗೋಡ್ಸೆಯನ್ನು ಸಂಭ್ರಮಿಸಿದ ಕಾರ್ಯಕ್ರಮ ನಡೆದಿದೆ.

Advertisements

ಗಾಂಧಿ ಹತ್ಯೆಯಲ್ಲಿ ಭಾಗಿಯಾದ ಹಂತಕರಾದ ನಾಥೂರಾಮ ಗೋಡ್ಸೆ ಮತ್ತು ನಾರಾಯಣ ನಾನಾ ಅಪ್ಟೆ ಅವರ ಕುಟುಂಬವನ್ನು ಸನ್ಮಾನಿಸುತ್ತೇವೆಂದು ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.

“ಭಾರತದಿಂದ ಗಾಂಧಿವಾದವನ್ನು ತೊಡೆದುಹಾಕಬೇಕು. ಗಾಂಧಿಯ ಆತ್ಮವನ್ನು ಇಲ್ಲವಾಗಿಸಬೇಕು. ಗಾಂಧಿ ಅವರನ್ನು ‘ರಾಷ್ಟ್ರಪಿತ’ ಎನ್ನಬಾರದು. ಆ ಬಿರುದನ್ನು ತೆಗೆಯಬೇಕು” ಎಂದು ಒತ್ತಾಯಿಸಿದ್ದಾರೆ.

1948ರ ಜನವರಿ 30ರಂದು ಬಿರ್ಲಾ ಮಂದಿರದ ಬಳಿ ಗಾಂಧಿ ಅವರನ್ನು ಹಿಂದು ಮಹಾಸಭಾದ ಸದಸ್ಯನಾಗಿದ್ದ ಗೋಡ್ಸೆ ಗುಂಡಿಕ್ಕಿ ಹತ್ಯೆಗೈದಿದ್ದ. ಗೋಡ್ಸೆಯನ್ನು ಬಂಧಿಸಿ, 1949ರಲ್ಲಿ ಅಂಬಾಲ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X