ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್ (34) ಮೃತ ಕಾರ್ಮಿಕ ಎಂದು ತಿಳಿದುಬಂದಿದೆ.
ನಾಪೋಕ್ಲು ಸಮೀಪದ ಹಳೆ ತಾಲೂಕಿನಲ್ಲಿ ಕಳೆದ ಎರಡು ತಿಂಗಳಿಂದ ಸಹೋದ್ಯೋಗಿಗಳೊಂದಿಗೆ ಕಟ್ಟಡ ಕಾಮಗಾರಿ ಕೆಲಸಕ್ಕೆಂದು ಕೇರಳದ ಕಣ್ಣೂರಿನಿಂದ ಬಂದಿದ್ದ ಶ್ರೀಜೇಶ್, ಬುಧವಾರ ಮಧ್ಯಾಹ್ನ ಮೂರು ಮಂದಿ ಸಹೋದ್ಯೋಗಿಗಳೊಂದಿಗೆ ಚೆರಿಯಪರಂಬು ಗ್ರಾಮದಲ್ಲಿರುವ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಕಂಡುಬಂದಿದೆ.
ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಎಎಸ್ಐ ಗೋಪಾಲಕೃಷ್ಣ, ಸಿಬ್ಬಂದಿಗಳಾದ ರವಿಕುಮಾರ್, ಶರತ್, ಲವ ಕುಮಾರ್, ಶರೀಫ್, ಪ್ರಸನ್ನ ಮತ್ತು ಗಣೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರಮ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಟ್ರ್ಯಾಕ್ಟರ್ ಪಲ್ಟಿ; ಚಾಲಕ ಸಾವು
ಮೃತ ದೇಹವನ್ನು ನಾಪೋಕ್ಲು ವಾಹನ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ಸ್ಥಳೀಯ ಹನೀಫ್, ಕರೀಮ್, ರಝಾಕ್ ಒಗ್ಗೂಡಿ ಒಂದು ಗಂಟೆಯ ಕಾಲ ನೀರಿನಲ್ಲಿ ಹುಡುಕಾಡಿ ಮೃತ ದೇಹವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದಾರೆ.