ಕಲಬುರಗಿ | ಬಂಗಾರದ ಬಳೆ ಮಾರಿ ಹಸಿದ ಮಕ್ಕಳಿಗೆ ಅನ್ನ ಹಾಕಿದ ಮಹಾನ್ ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್:‌ ಅಶ್ವಿನಿ ಮದನಕರ್

Date:

Advertisements

ರಮಾಬಾಯಿ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ ಅಪಾರವಾದದ್ದು. ರಮಾಬಾಯಿ ಅಂಬೇಡ್ಕರ್ ಅವರು ತಮ್ಮ ಅನಾರೋಗ್ಯದ ನಿಮಿತ್ತ ಕರ್ನಾಟಕಕ್ಕೆ ಬಂದಿದ್ದು, ಧಾರವಾಡದ ಹಾಸ್ಟೆಲ್‌ನಲ್ಲಿ ನೆಲೆಸಿದ್ದರು. ಆ ಸಂದರ್ಭದಲ್ಲಿ ಯಾವುದೇ ಭೇದಭಾವವಿಲ್ಲದೆ ತನ್ನ ಬಂಗಾರದ ಬಳೆಗಳನ್ನು ಮಾರಿ ಹಸಿದ ಮಕ್ಕಳಿಗೆ ಅನ್ನ ಹಾಕಿದ ಭಾರತದ ಮಹಾನ್ ತ್ಯಾಗಮಯಿ ಎಂದು ನಾರಿಶಕ್ತಿ ಕರ್ನಾಟಕ ಮಹಿಳಾ ಸಂಘಟನೆಯ ಸಂಸ್ಥಾಪಕಿ ಅಶ್ವಿನಿ ಮದನಕರ್ ಸ್ಮರಿಸಿದರು.

ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ “ರಮಾಬಾಯಿ ಅಂಬೇಡ್ಕರ್ ಅರಿವಿನ ರಥಯಾತ್ರೆ” ಕಾರ್ಯಕ್ರಮದಲ್ಲಿ ಮಾತನಾಡಿದರು.

“ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗವನ್ನು ಸ್ಮರಿಸಬೇಕೆಂದರೆ ರಮಾಮಾಯಿಯವರನ್ನು ಜನಮಾನಸದಲ್ಲಿ ಪ್ರಚಾರಪಡಿಸಬೇಕು. ಜತೆಗೆ ರಮಾಬಾಯಿ ಅಂಬೇಡ್ಕರ್ ಅವರ ಸ್ಮರಣಾರ್ಥವಾಗಿ ಕರ್ನಾಟಕದಲ್ಲಿರುವ ಮಹಿಳಾ ಹಾಸ್ಟೆಲಗಳಿಗೆ ರಮಾಬಾಯಿ ಅಂಬೇಡ್ಕರ್ ಹೆಸರಿಡುವುದಕ್ಕಾಗಿ ನಾವು ಸರ್ಕಾರಕ್ಕೆ ಒತ್ತಾಯಿಸಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದಿದ್ದ ನಾಲ್ವರು ಹಂತಕರಿಗೆ ಮರಣದಂಡನೆ

ರಮಾಬಾಯಿ ಅಂಬೇಡ್ಕರ್ ಅರಿವಿನ ರಥಯಾತ್ರೆ ಕಾರ್ಯಕ್ರಮಕ್ಕೆ ಖ್ಯಾತ ಉದ್ಯಮಿ ಮಲ್ಲಿಕಾರ್ಜುನ್ ಗಾಯಕವಾಡ್ ಚಾಲನೆ ನೀಡಿದರು.

ರಮಾಬಾಯಿ ಅಂಬೇಡ್ಕರ್ ರಥಯಾತ್ರೆಯಲ್ಲಿ ಅತಿಥಿಗಳಾಗಿ ಎಸ್‌ಸಿ/ಎಸ್‌ಟಿ ವಕೀಲರ ಸಂಘದ ಅಧ್ಯಕ್ಷ ಮಸ್ತಾನ್ ದಂಡೆ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರಾಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶರಣು ಅಂಬರಾಯ, ಚಿಂಚೋಳಿ ಈಶ್ವರ್ ಪ್ರಹ್ಲಾದ್ ಡಾಂಗೆ‌, ಸೈಯದ್ ಪಟೇಲ್, ಅಭಿಷೇಕ್ ಪೂಜಾರಿ ಹಾಗೂ ಸಮಸ್ತ ಗ್ರಾಮದ ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರಾಹುಲ್ ಡಾಂಗೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X