ಗೋಮಾಂಸ ರಫ್ತು ಉದ್ಯಮವನ್ನು ಜೈನರು ಕಬ್ಜ ಮಾಡಿದ್ದಾರೆ: ಅಗ್ನಿ ಶ್ರೀಧರ್

Date:

Advertisements

ಗೋಮಾಂಸ ರಫ್ತು ಉದ್ಯಮದಲ್ಲಿ ಮುಸ್ಲಿಂ ಸಮುದಾಯದ ಪಾಲು ಕಡಿಮೆಯಾಗಿದೆ. ಆ ಜಾಗವನ್ನು ಜೈನ ಸಮುದಾಯ ಕಬ್ಜ ಮಾಡುತ್ತಿದೆ. ಗೋಮಾಂಸ ರಫ್ತಿನಲ್ಲಿ ಜೈನ ಸಮುದಾಯದ ಕೆಲವರು ತೊಡಗಿದ್ದು, ಅವರು ವಾರ್ಷಿಕ 40,000 ಕೋಟಿ ರೂ. ವಹಿವಾಟು ನಡೆಸುತ್ತಿದ್ದಾರೆ ಎಂದು ರಾಷ್ಟ್ರೀಯ ದ್ರಾವಿಡ ಸಂಘದ (ಆರ್‌ಡಿಎಸ್‌) ಅಧ್ಯಕ್ಷ ಅಗ್ನಿ ಶ್ರೀಧರ್ ಆರೋಪಿಸಿದ್ದಾರೆ.

ಮುಸ್ಲಿಂ ಸಮುದಾಯದವನ್ನು ಗೋಮಾಂಸ ರಫ್ತು ಉದ್ಯಮದಿಂದ ಹೊರಗಿಡಲು ಆರ್‌ಎಸ್‌ಎಸ್‌ ಅಣತಿಯಂತೆ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಕಾಯ್ದೆ ಜಾರಿಯಾಗುವುದರ ಹಿಂದೆ ಜೈನ ಸಮುದಾಯದ ಹುನ್ನಾರವೂ ಇದೆ ಎಂದು ಆರೋಪ ಮಾಡಿದ್ದಾರೆ.

ಮುಸ್ಲಿಮರಲ್ಲಿ ಹಲವರು ಗೋಮಾಂಸ ತಿನ್ನುವುದಿಲ್ಲ. ಆದರೆ, ಗೋಹತ್ಯೆ ಅಂತ ಬಂದಾಗೆಲ್ಲ ಗೋಮಾಂಸ ಮುಸ್ಲಿಮರ ಆಹಾರವೆಂದು ಪ್ರಚಾರ ಮಾಡುತ್ತಿದೆ. ಹೆಚ್ಚಾಗಿ ಗೋಮಾಂಸ ತಿನ್ನುವವರು ದಲಿತರು ಮತ್ತು ಕ್ರೈಸ್ತರು. ಆದರೆ, ಇದನ್ನು ಉದ್ದೇಶಪೂರ್ವಕವಾಗಿ ಮರೆಮಾಚಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ವಿಷ ಬಿತ್ತಲಾಗುತ್ತಿದೆ ಎಂದು ದೂರಿದ್ದಾರೆ.

Advertisements

ಹಸುವನ್ನು ಕೊಂದರೆ ತಾಯಿಯನ್ನೇ ಕೊಂದಂತೆ ಎಂದು ಭಾವನಾತ್ಮಕ ಹೇಳಿಕೆಗಳನ್ನು ಸಂಘಪರಿವಾರ ನೀಡುತ್ತಿದೆ. ಆ ಮೂಲಕ ಜನರ ಭಾವನೆಗಳನ್ನು ಕೆರಳಿಸುತ್ತಿದೆ. ಗೋಮಾಂಸದ ವಿಚಾರದಲ್ಲಿ ಆಹಾರದ ಹಕ್ಕನ್ನು ಬದಿಗೆ ಸರಿಸಿ, ಭಾವನಾತ್ಮಕ ಅಂಶಗಳನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಗೋವನ್ನು ತಾಯಿ ಎನ್ನುವವರು ಯಾಕೆ ಜಾತ್ರೆಗಳಲ್ಲಿ ಅವುಗಳನ್ನು ಮಾರಾಟ-ಖರೀದಿ ಮಾಡುತ್ತಿದ್ದಾರೆ? ಗೋಮಾತೆಯನ್ನು ಯಾಕೆ ರಸ್ತೆಯಲ್ಲಿ ಬಿಡುತ್ತಿದ್ದಾರೆ ಎಂದು ಹಸುವಿನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವವರನ್ನು ಪ್ರಶ್ನಿಸಬೇಕು ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X