ಧಾರವಾಡ | ಕ್ರೀಡಾಪಟುಗಳು ಸೋತರೂ ಗೆಳೆತನ‌ ಬಿಡಬೇಡಿ: ಗೌರಮ್ಮ ಬಳೋಗಿ

Date:

Advertisements

ಧಾರವಾಡದ ಮದಿಹಾಳ ಆದಿಶಕ್ತಿ ಕಾಲೋನಿ ಬಡಾವಣೆಯಲ್ಲಿ ಪ್ರತಿ ವರ್ಷದಂತೆ ನಡೆಯುವ ಎಮ್.ಸಿ.ಎಲ್ ಸೀಸನ್ 2 ಕ್ರಿಕೆಟ್ ಟೂರ್ನಮೆಂಟ್‌ ಸ್ಪರ್ಧೆಗೆ ಕಾಂಗ್ರೆಸ್ ನಾಯಕಿ ಗೌರಮ್ಮ ಬಳೋಗಿ ಉದ್ಘಾಟಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು ಗೆಲ್ಲುವುದು ಮುಖ್ಯವಲ್ಲ. ಯುವಕರು ಸೋತರು ನಿಮ್ಮ ಗೆಳೆತನ ಬಿಡಬಾರದು. ಮತ್ತು ಕ್ರೀಡಾ ಸಮಯದಲ್ಲಿ ಕ್ರೀಡಾಪಟುಗಳು ಪರಸ್ಪರ ಜಗಳವಾಡದೆ ಶಾಂತವಾಗಿ ಆಟವಾಡಬೇಕು. ಯುವಕರು ಓದಿನ ಜೊತೆಗೆ ಕ್ರೀಡೆಯಲ್ಲಿ ಆಸಕ್ತಿವಹಿಸಿದಾಗ ದೇಶದ ಉನ್ನತಿಗೆ ದಾರಿಯಾಗುತ್ತದೆ. ಕ್ರೀಡಾ ತಂಡಗಳು ನಂತರದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಹಾರೈಸಿದರು.

ಸ್ಪರ್ಧೆಯಲ್ಲಿ ಒಟ್ಟು 8 ಕ್ರಿಕೆಟ್ ತಂಡಗಳು ಭಾಗವಹಿಸಿದ್ದು, ಕ್ರಿಕೆಟ್ ಆಸಕ್ತರು, ಅಭಿಮಾನಿಗಳು ಇದ್ದರು.

Advertisements

ಈ ಸಂದರ್ಭದಲ್ಲಿ ಸತೀಶ್ ಸಿಂಧೆ ಮಾತನಾಡಿ, ಕ್ರಿಕೆಟ್ ಹಬ್ಬದ ವಾತಾವಾರಣ ನಿರ್ಮಾಣವಾಗಿದ್ದು, ಗೌರಮ್ಮ ಬಳೋಗಿ ಅವರು ಇಂತಹ ಕ್ರೇಡೆಗಳಿಗೆ ನಿರಂತರ ಪ್ರೊತ್ಸಾಹ ಮತ್ತು ಬೆಂಬಲಿಸುತ್ತ ಬಂದಿದ್ದಾರೆ ಎಂದರು.

ಈ ವೇಳೆ ಸಂಗಣ್ಣ ಬಡಗಿಗೌರ, ಯಮನಪ್ಪ ಮೇಟಿ, ದಿನೇಶ್ ದುಮ್ಮಾಳ, ಸುಭಾಷ್ ಸೂರ್ಯವಂಶಿ, ಮಹೇಶ್ ಸಿಂಧೆ, ಗುರುಬಸಪ್ಪ ತೋಟದ ಇನ್ನಿತರರು ವೇದಿಕೆ ಮೇಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X