ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Date:

Advertisements

ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾ ಕುಂಭಮೇಳವೆಂಬ ಸನಾತನ ಗರ್ವ, ಕಾಲ್ತುಳಿತದ ಪರ್ವ

ಹಾರೂಗೇರಿ ಪಶು ವೈದ್ಯಕೀಯ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆ: ಪಿಡಿಒ ಮನೆ ಮೇಲೆ ಲೋಕಾ ದಾಳಿ

ಗ್ರಾಮ ಪಂಚಾಯತ್ ಪಿಡಿಒ ಎಸ್.ಪಿ.ಹಿರೇಮಠ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್​ನಲ್ಲಿರುವ ಮನೆ‌ ಮೇಲೆ ಬಾಗಲಕೋಟೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತರು ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದಾರೆ. ಹಿರೇಮಠ ಅವರ ನರಗುಂದದ ನಿವಾಸದ ಮೇಲೂ ದಾಳಿ ನಡೆದಿದೆ.

ಹೂಲಗೇರಿ ಪಿಡಿಒ ಎಸ್​​.ಪಿ.ಹಿರೇಮಠ ಐಷಾರಾಮಿ‌ ಮನೆ ಹೊಂದಿದ್ದು, ಇವರ ಮನೆಯಲ್ಲಿ ಪತ್ತೆಯಾಗಿರುವ ನಗದು ನೋಟುಗಳನ್ನು ಎಣಿಸಲು ಲೋಕಾ ಅಧಿಕಾರಿಗಳು ಮನೆಯೊಳಗೆ ಹಣ ಎಣಿಸುವ ಯಂತ್ರ ತೆಗೆದುಕೊಂಡು ಹೋಗಿದ್ದಾರೆ.

ಮತ್ತೊಂದೆಡೆ, ಜಿ.ಪಂ. ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಅವರ ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿನ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಸದ್ಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X