ಗದಗ | ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದಿದ್ದ ನಾಲ್ವರು ಹಂತಕರಿಗೆ ಮರಣದಂಡನೆ

Date:

Advertisements

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಮತ್ತು ಅಳಿಯನನ್ನು ಭೀಕರವಾಗಿ ಹತ್ಯೆಗೈದಿದ್ದ ಮೃತ ಯುತಿಯ ನಾಲ್ವರು ಸಂಬಂಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.

ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ 2019ರಲ್ಲಿ ಘಟನೆ ನಡೆದಿತ್ತು. ಪ್ರಬಲ ಜಾತಿಯ ಗಂಗವ್ವ ರಾಠೋಡ್ ಮತ್ತು ತಳಸಮುದಾಯದ ರಮೇಶ್‌ ಮಾದರ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಗಂಗವ್ವ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, 2017ರಲ್ಲಿ ಊರು ತೊರೆದು ವಿವಾಹವಾಗಿದ್ದರು. ಬೆಂಗಳೂರಿನಲ್ಲಿ ನಡೆಸಿದ್ದರು.

ವಿವಾಹವಾದ 2 ವರ್ಷಗಳ ಬಳಿಕ, 2019ರಲ್ಲಿ ದಂಪತಿಗಳು ತಮ್ಮೂರಿಗೆ ಮರಳಿದ್ದರು. ಬೇರೊಂದು ಮನೆ ಮಾಡಿಕೊಂಡು ಜೀವನ ಆರಂಭಿಸಿದ್ದರು. 2019ರ ನವೆಂಬರ್ 6ರಂದು ಅವರ ಮನೆಗೆ ನುಗ್ಗಿದ ಗಂಗವ್ವ ಅವರ ಚಿಕ್ಕಪ್ಪ ಶಿವಪ್ಪ ರಾಠೋಡ್, ಪರಶುರಾಮ ರಾಠೋಡ್ ಮತ್ತು ಆಕೆಯ ತಮ್ಮಂದಿರಾದ ರವಿ, ರಮೇಶ್‌ ದಂಪತಿಗಳ ಮೃಗೀಯವಾಗಿ ಹಲ್ಲೆ ನಡೆಸಿದ್ದರು.

Advertisements

ಗಂಗವ್ವ-ರಮೇಶ್‌ ದಂಪತ್ತಿಗಳನ್ನು ಮನೆಯಿಂದ ಹೊರಗೆಳೆದು ತಂದು, ಕಟ್ಟಿಗೆಗಳು, ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿ, ಕಲ್ಲು ಎತ್ತಿಹಾಕಿ, ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿದ್ದರು. ಗಂಗವ್ವ-ರಮೇಶ್‌ ಹತ್ಯೆ ಇಡೀ ಗದಗ ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಸೆಕ್ಷನ್ 427, 449, 302, 506(2) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಡನೆಸಿದ್ದ ಗಜೇಂದ್ರಗಢ ಪೊಲೀಸರು 2020ರ ಜವವರಿ 18ರಂದು ಚಾರ್ಜ್‌ಶೀಟ್‌ ಸಲ್ಲಿಸದ್ದರು.

ಐದು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಗದಗ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಸ್‌ ಬಸವರಾಜ್‌ ಅವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದಾರೆ. ನಾಲ್ವರು ಅಪರಾಧಿಗಳಿಗೂ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X