ಧಾರವಾಡ | ಸತ್ತೂರು ಒಳಚರಂಡಿ ನಿರ್ಮಾಣಕ್ಕೆ ಒತ್ತಾಯ: ನೂತನ ಆಯುಕ್ತರಿಗೆ ಮನವಿ

Date:

Advertisements

ಧಾರವಾಡ ಸತ್ತೂರ ಬಡಾವಣೆಯ, ರಾಜಾಜಿ ನಗರದಲ್ಲಿ ಹೊಸ ಕಾಂಕ್ರೀಟ್ ಗಟಾರ (ಒಳಚರಂಡಿ) ನಿರ್ಮಾಣ ಮಾಡಲು ಒತ್ತಾಯಿಸಿದರು. ಈ ವೇಳೆ ಆಲ್ ಇಂಡಿಯಾ ಕಾಂಗ್ರೆಸ್ ಕಮೀಟಿ ನ್ಯಾಶನಲ್ ಕೋ-ಅರ್ಡಿನೇಟರ್ ಜಗದೀಶ ಘೋಡಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತ ರುದ್ರೇಶ ಗಾಳಿ ಅವರಿಗೆ ಮನವಿ ಮಾಡಿಕೊಂಡು ಸನ್ಮಾನಿಸಿದರು.

ನಂತರ ಮಾತನಾಡಿದ ಅವರು, ಗಟಾರು ನಿರ್ಮಾಣವಾಗಿ ಎರಡು ದಶಕಗಳು ಕಳೆದಿದ್ದು, ಪ್ರಸ್ತುತ ಬಡಾವಣೆಯಲ್ಲಿಯ ಗಟಾರುಗಳೇ ಮಾಯವಾಗಿವೆ. ಮಳೆಗಾಲದಲ್ಲಿ ನೀರು ಹರಿದು ಹೋಗಲು ಗಟಾರ ವ್ಯವಸ್ಥೆ ಇಲ್ಲದಿರುವುದರಿಂದ, ನೀರು ರಸ್ತೆಯ ಮೇಲೆ ಹರಿದು ಬಂದು, ರಸ್ತೆಯ ಬದಿಗಿರುವ ಮನೆಯೊಳಗೆ ಕೊಳಚೆ ನೀರು ನುಗ್ಗುತ್ತದೆ. ಕಲುಷಿತ ನೀರಿನೊಂದಿಗೆ ವಿಷಜಂತುಗಳು ಸಹ ಮನೆಯೊಳಗೆ ಬರುತ್ತಿವೆ. ಇದರಿಂದ ಜನರು ಜೀವಭಯದಿಂದ ಬದುಕುತ್ತಿದ್ದಾರೆ. ಕಲುಷಿತ ನೀರು ಮನೆಯೊಳಗೆ ಬರುವುದರಿಂದ ರೋಗ ರುಜಿನಗಳಿಗೆ ಹೆದರುವ ವಾತಾವರಣ ಸೃಷ್ಠಿಯಾಗಿದೆ ಎಂದರು.

ಈ ಕುರಿತು ಪವನ ಮಾತನಾಡಿ, ನಾವು ಮತ್ತು ವಿವಿಧ ಸಂಘಟನೆಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಅನೇಕ ಬಾರಿ ಮನ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅದ್ದರಿಂದ ಶೀಘ್ರವಾಗಿ ಈ ಸಮಸ್ಯೆಗೆ ತಾವು ಪರಿಹಾರವನ್ನು ಒದಗಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ಆರೋಗ್ಯ ಕ್ಷೇತ್ರದ ಖಾಸಗಿಕರಣ ನಿಲ್ಲಿಸಲು ಅಗ್ರಹಿಸಿ ಕಮ್ಯೂನಿಸ್ಟ್‌ ಪಕ್ಷ ಬೃಹತ್ ಪ್ರತಿಭಟನೆ

ಪಾಲಿಕೆ ಆಯುಕ್ತ ರುದ್ರೇಶ ಗಾಳಿ‌ ಮಾತನಾಡಿ, ಈ ಕುರಿತು ಮಾಹಿತಿ ಸಂಗ್ರಹಿಸಿ ಕಾರ್ಯೋನ್ಮುಖರಾಗುತ್ತೇವೆ ಎಂದರು. ಈ ಸಂದರ್ಭದಲ್ಲಿ ಮಹಮ್ಮದ್ಅಲಿ ಗುಡೂಭಾಯಿ, ಮಹದೇವ ಬೋಸ್ಲೇ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X