ಫೆ. 3, 4ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Date:

Advertisements

ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಫೆ. 3 ಮತ್ತು 4ನೇಯ ತಾರೀಖಿಗೆ 17ನೇಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಈ ಕುರಿತು ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿದ್ದರು.

ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಸಾಹಿತಿ ಎಮ್ ಸಿ ಸಿದ್ದರಾಮಯ್ಯ ಮಾತನಾಡಿ, ಪ್ರಬಂಧ ಸಾಹಿತ್ಯದಲ್ಲಿ ಉತ್ತಮ ಕೊಡುಗೆಯನ್ನು ನೀಡಿರುವ ಎಸ್ ಆರ್ ಗುಂಜಾಳ’ರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಬಹಳಷ್ಟು ಖುಷಿತಂದಿದೆ. ಸಾಹಿತ್ಯ ಪರಿಷತ್ತು ಕನ್ನಡದ ಸಾಕ್ಷಿಪ್ರಜ್ಞೆಯಾಗಿ ಬೆಳೆದಿದೆ. ಸಾಹಿತ್ಯ ಕ್ಷೇತ್ರವು ಸ್ವಾಯತ್ತತೆ ಕಾಪಾಡಿಕೊಂಡಷ್ಟು ದೇಶದ ಹೆಚ್ಚು ಸಾಧ್ಯ. ಈ ಸಮ್ಮೇಳನದಲ್ಲಿ ಬಹುತೇಕವಾಗಿ ಎಲ್ಲರನ್ನೂ ಒಳಗೊಂಡಿದ್ದಾರೆ. ಎಲ್ಲಾ ರೀತಿಯ ವಿಷಯಗಳನ್ನು ಚರ್ಚೆ ಮತ್ತು ಸಂವಾದಕ್ಕೆ ತೆಗೆದುಕೊಂಡಿದ್ದಾರೆ. ವಿಶೇಷವಾಗಿ ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವ ವಿಚಾರವನ್ನು ಅಳವಡಿಸಿದ್ದಾರೆ ಎಂದು ಸಂತಸಪಟ್ಟರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಲಿಂಗರಾಜ್ ಅಂಗಡಿ ಮಾತನಾಡಿ, ಸಾಹಿತ್ಯ ಸಮ್ಮೇಳನಕ್ಕಾಗಿ 5 ಲಕ್ಷ ರೂ. ಕೇಂದ್ರ ಪರಿಷತ್ತು ನೀಡುತ್ತಿದೆ. ನಾವು ಜನರಿಂದ ಯಾವುದೇ ಹಣವನ್ನು ಸಂಗ್ರಹಿಸಿಲ್ಲ. ಮಹಾನಗರ ಪಾಲಿಕೆಯಿಂದ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ. ಸಮ್ಮೇಳನಕ್ಕೆ ಆಹ್ವಾನಿಸುವುದರಲ್ಲಿ ನಾವು ಯಾರನ್ನೂ ಕೈಬಿಟ್ಟಿಲ್ಲ. ಎಲ್ಲರನ್ನೂ ಒಳಗೊಂಡು ಕಾರ್ಯಕ್ರಮವನ್ನು ರೂಪಿಸಲಾಗಿದೆ. ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ ಎಂದರು.

Advertisements

ಈ ವರದಿ ಓದಿದ್ದೀರಾ? ಹುಬ್ಬಳ್ಳಿ‌‌ | ಅಕ್ರಮ ಗಾಂಜಾ ಮಾರಾಟ : ನಾಲ್ವರ ಬಂಧನ

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ, ಶಂಕರ್ ಹಲಗತ್ತಿ, ಸಹ ಕಾರ್ಯದರ್ಶಿ ಶಂಕರ್ ಕುಂಬಿ ಮತ್ತು ಇನ್ನಿತರರು ವೇದಿಕೆ ಮೇಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X