ಗುಜರಾತ್ ಗಲಭೆ | ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದರ ಪತ್ನಿ ಝಕಿಯಾ ಜಾಫ್ರಿ ನಿಧನ

Date:

Advertisements

2002ರ ಗುಜರಾತ್ ಗಲಭೆಯಲ್ಲಿ ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಶನಿವಾರ ಅಹಮದಾಬಾದ್‌ನಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

2002ರ ಫೆಬ್ರವರಿ 28ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ ಮರುದಿನ ಅಹಮದಾಬಾದ್‌ನಲ್ಲಿ ಮುಸ್ಲಿಮರು ಅಧಿಕವಾಗಿ ವಾಸಿಸುವ ಪ್ರದೇಶವಾದ ಗುಲ್ಬರ್ಗ್ ಸೊಸೈಟಿಯಲ್ಲಿ 69 ಜನರ ಕೊಲೆಯಾಗಿತ್ತು. ಕೊಲೆಯಾದವರ ಪೈಕಿ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡಾ ಒಬ್ಬರಾಗಿದ್ದರು. ಇದಾದ ಬಳಿಕ ರಾಜ್ಯಾದ್ಯಂತ ಭೀಕರ ಗಲಭೆ ಉಂಟಾಗಿತ್ತು.

ಇದನ್ನು ಓದಿದ್ದೀರಾ? ವಿಜಯಪುರ | ಬಾಬ್ರಿ ಮಸೀದಿ, ಗುಜರಾತ್ ಗಲಭೆಯನ್ನು ಪಠ್ಯದಿಂದ ಕೈಬಿಟ್ಟ ಎನ್‌ಸಿಇಆರ್‌ಟಿ: ಎಐಡಿಎಸ್ಒ ಆಕ್ರೋಶ

Advertisements

ಗೋಧ್ರಾ ರೈಲು ದಹನ ಘಟನೆಯ ಬಳಿಕ ನಡೆದ ಗಲಭೆಗೆ ಉನ್ನತ ರಾಜಕೀಯ ನಾಯಕರೇ ಹೊಣೆಗಾರರು ಎಂದು ವಾದಿಸಿದ್ದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು.

ಝಕಿಯಾ ಜಾಫ್ರಿ ನಿಧನದ ಬಗ್ಗೆ ಅವರ ಪುತ್ರ ತನ್ವೀರ್ ಜಾಫ್ರಿ ಮಾಹಿತಿ ನೀಡಿದ್ದಾರೆ. “ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಗೆ ಭೇಟಿ ನೀಡುತ್ತಿದ್ದರು. ತಮ್ಮ ದೈನಂದಿನ ದಿನಚರಿಯನ್ನು ಮುಗಿಸಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸಾಮಾನ್ಯವಾಗಿ ಮಾತನಾಡುತ್ತಿದ್ದಾಗ ದಿಡೀರ್ ಅಸ್ವಸ್ಥತೆ ಕಾಣಿಸಿಕೊಂಡಿದ್ದಾಗಿ ಕರೆ ಬಂದಿದೆ. ವೈದ್ಯರು ಬೆಳಿಗ್ಗೆ 11:30ರ ಸುಮಾರಿಗೆ ನನ್ನ ತಾಯಿ ನಿಧನರಾಗಿರುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ, ಝಕಿಯಾ ಜೊತೆ ಸಹದೂರುದಾರೆಯಾದ ತೀಸ್ತಾ ಸೆಟಲ್‌ವಾಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಾನವ ಹಕ್ಕುಗಳ ಪರ ಹೋರಾಡಿದ ನಾಯಕಿ ಝಕಿಯಾ ಆಪಾ ಕೇವಲ 30 ನಿಮಿಷಗಳ ಹಿಂದೆ ನಿಧನರಾದರು. ಕುಟುಂಬದೊಂದಿಗೆ ನಾವಿದ್ದೇವೆ” ಎಂದು ಪೋಸ್ಟ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X