ವಿಜಯನಗರ | ಎರಡು ಕಡೆ ಕುರಿ ಹಟ್ಟಿಗಳಿಗೆ ಬೆಂಕಿ; 55 ಮೇಕೆ, ಎರಡು ಟಗರು ಸಾವು

Date:

Advertisements

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿ ಹಟ್ಟಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 55 ಮೇಕೆ, ಎರಡು ಟಗರು ಸುಟ್ಟು ಭಸ್ಮವಾಗಿವೆ.

ಗ್ರಾಮದ ಹೊರವಲಯದಲ್ಲಿ ಮಡಿವಾಳರ ಶೇಖರಪ್ಪ ಮತ್ತು ನಾಯಕರ ಗಿರಿಜಮ್ಮನವರು ಕುರಿಗಳಿಗಾಗಿ ಎರಡು ಪ್ರತ್ಯೇಕ ಹಟ್ಟಿ ಕಟ್ಟಿಕೊಂಡಿದ್ದರು. ಒಂದು ಹಟ್ಟಿಯಲ್ಲಿದ್ದ ಮಡಿವಾಳರ ಶೇಖರಪ್ಪನಿಗೆ ಸೇರಿದ 40 ಮೇಕೆ ಮರಿಗಳು ಹಾಗೂ ಮತ್ತೊಂದು ಹಟ್ಟಿಯಲ್ಲಿದ್ದ ಗಿರಿಜಮ್ಮನಿಗೆ ಸೇರಿದ 15 ಮೇಕೆಮರಿ 2 ಟಗರು ಬೆಂಕಿಯಲ್ಲಿ ಸಜೀವ ದಹನವಾಗಿವೆ ಎಂದು ಗ್ರಾಮದ ಮುಖಂಡರು ತಿಳಿಸಿದರು.

“ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಸಾಧ್ಯತೆ ಇದ್ದು, ಬೆಂಕಿ ಹೊತ್ತಿಕೊಂಡಿರುವ ಕಾರಣ ತಿಳಿಯುವ ಪ್ರಯತ್ನ ನಡೆದಿದೆ” ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಂಗಳೂರು | ಪಣಂಬೂರು ಪೊಲೀಸ್ ಠಾಣೆಗೆ ಎಆರ್‌ಕೆ ಶಾಲಾ ವಿದ್ಯಾರ್ಥಿಗಳ ಭೇಟಿ: ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಾಯೋಗಿಕ ಪಾಠ

ಕೂಡ್ಲಿಗಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ತಹಶೀಲ್ದಾರ್ ಎಂ ರೇಣುಕಾ, ಕಾನಹೊಸಹಳ್ಳಿ ಎಎಸ್‌ಐ ಜಿಲಾನ್, ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ ಲೋಹಿತ್, ಶಾಸಕರ ಆಪ್ತ ಸಹಾಯಕ ಮರುಳಸಿದ್ದಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ವೈಯಕ್ತಿಕ ಸಹಾಯದ ಜತೆಗೆ ಸರ್ಕಾರದಿಂದ ನೀಡುವಂತಹ ಪರಿಹಾರವನ್ನು ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X