ಕಾರ್ಯಕ್ರಮದಲ್ಲಿ ಮಹಿಳಾ ಅಭಿಮಾನಿ ತುಟಿಗೆ ಮುತ್ತಿಟ್ಟ ಹಿರಿಯ ಗಾಯಕ ಉದಿತ್ ನಾರಾಯಣ್; ವ್ಯಾಪಕ ಟೀಕೆ

Date:

Advertisements

ಕಾರ್ಯಕ್ರಮವೊಂದರಲ್ಲಿ ಹಿರಿಯ ಗಾಯಕ ಉದಿತ್ ನಾರಾಯಣ್ ಅವರು ಮಹಿಳಾ ಅಭಿಮಾನಿಗಳ ತುಟಿಗೆ ಮುತ್ತಿಟ್ಟಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.

ನೆಟ್ಟಿಗರು ಗಾಯಕ ಉದಿತ್ ನಾರಾಯಣ್ ಈ ಹಿಂದೆ ಅಲ್ಕಾ ಯಾಗ್ನಿಕ್ ಮತ್ತು ಶ್ರೇಯಾ ಘೋಷಾಲ್ ಅವರಂತಹ ಮಹಿಳಾ ಗಾಯಕಿಯರ ಕೆನ್ನೆಗೆ ಮುತ್ತಿಟ್ಟಿದ್ದ ಸಂದರ್ಭದ ವಿಡಿಯೋಗಳನ್ನು ಕೂಡಾ ಹಂಚಿಕೊಂಡಿದ್ದಾರೆ. ಹಾಗೆಯೇ ಹಿರಿಯ ಗಾಯಕರನ್ನು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

Advertisements

ವಿಡಿಯೋಗಳಲ್ಲಿ ಮಹಿಳಾ ಅಭಿಮಾನಿ ಸೆಲ್ಫಿ ತೆಗೆದ ಬಳಿಕ ಗಾಯಕ ಆಕೆಯ ಕೆನ್ನೆಗೆ ಮುತ್ತಿಟ್ಟಿರುವುದು ಕಾಣಬುದು. ಅದಾದ ಬಳಿಕ ಹಲವು ಮಹಿಳಾ ಅಭಿಮಾನಿಗಳು ಸೆಲ್ಫಿ ತೆಗೆಯುವಾಗ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನೊಂದು ಯುವತಿಯ ತಲೆ ಸವರಿ ಆಕೆಯ ತುಟಿಗೆ ಗಾಯಕ ಮುತ್ತಿಟ್ಟಿದ್ದು, ಯುವತಿ ಆಶ್ಚರ್ಯಚಕಿತಳಾಗಿರುವುದು ವಿಡಿಯೋದಲ್ಲಿ ಕಾಣಬಹುದು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉದಿತ್ ನಾರಾಯಣ್ ಅವರು ಈ ಹಿಂದೆ ಒಪ್ಪಿಗೆ ಪಡೆಯದೆಯೇ ಗಾಯಕಿ ಅಲ್ಕಾ ಯಾಗ್ನಿಕ್ ಕೆನ್ನೆಗೆ ಮುತ್ತಿಟ್ಟ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವರು ಈ ವಿಡಿಯೋ ನೋಡಿ ಗಾಯಕನನ್ನು ಟೀಕಿಸಿದರೆ, ಇನ್ನೂ ಕೆಲವರು ಇದು ಎಐನಿಂದ ರಚಿತ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಉದಿತ್ ನಾರಾಯಣ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

69 ವರ್ಷದ ಉದಿತ್ ನಾರಾಯಣ್ ಬಾಲಿವುಡ್‌ನ ಅತ್ಯಂತ ಪ್ರಸಿದ್ಧ ಗಾಯಕರಾಗಿದ್ದಾರೆ. ಇತರ ಭಾರತೀಯ ಭಾಷೆಗಳಲ್ಲಿಯೂ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಉದಿತ್ ಅವರಿಗೆ, 2009ರಲ್ಲಿ ಪದ್ಮಶ್ರೀ ಮತ್ತು 2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X