ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

Date:

Advertisements

ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಬಸವರಾಜ ತಲ್ಲೂರ ಅವರು ತಮ್ಮ ಹುಟ್ಟ ಹಬ್ಬವನ್ನು ಕೇಕ್ ಕತ್ತರಿಸದೆ, ಪರಿಸರ ನಾಶಕ್ಕೆ ಎಡೆಮಾಡಿಕೊಡದೆ, ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ, ಪರಿಸರ ಖಾಳಜಿಯೊಂದಿಗೆ ವಿಭಿನ್ನವಾಗಿ ಆಚರಸಿಕೊಂಡಿದ್ದು, ಮಾದರಿ ಹುಟ್ಟುಹಬ್ಬವಾಗಿದೆ. ಆ ಹಿನ್ನೆಲೆಯಲ್ಲಿ ಅವರ ವಿದ್ಯಾರ್ಥಿಗಳು ನಗರವನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಗುರುಗಳಿಗೆ ಜನುಮದಿನದ ವಿಶಿಷ್ಠ ಉಡುಗೊರೆ ನೀಡಿದ್ದಾರೆ ಎಂದು ಡಾ. ವಿಲಾಸ ಕುಲಕರ್ಣಿ ಹೇಳಿದರು.

ಇಂದು ಬೆಳಿಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಶ್ರೀನಗರದ ಉದ್ಯಾನವನ ಹಾಗೂ ನಗರದ ಕೆಲ ರಸ್ತೆಗಳಲ್ಲಿ ಸ್ವಶ್ಚತೆ ಮಾಡುವುದರ ಮೂಲಕ ಹುಟ್ಟು ಹಬ್ಬವನ್ನು ಅಚರಿಸಿದ್ದು, ಈ ರೀತಿಯ ವಿಶಿಷ್ಟ ಆಚರಣೆಯು ಸತತ 5 ವರ್ಷಗಳಿ‌ಂದ ನಡೆದುಕೊಂಡು ಬಂದಿದ್ದು, ಈ ತರಹದ ಜನುಮದಿನದ ಆಚರಣೆ ನಮಗೂ ರೂಢಿಯಾಗಿದೆ ಅನ್ನುತ್ತಾರೆ ವಿದ್ಯಾರ್ಥಿಗಳು.

ಡಾ. ವಿಲಾದ ಕುಲಕರ್ಣಿ ಮುಂದುವರೆದು ಮಾತನಾಡಿ, ಹುಟ್ಟು ಹಬ್ಬ ಅಂದಾಕ್ಷಣ ಕೆಲವರು ಕೇಕ್ ಕತ್ತರಿಸಿ, ಮೊಟ್ಟೆ ಹೊಡೆದು ಪರಿಸರ ನಾಶ ಮಾಡುವ ರೀತಿಯಲ್ಲಿ ತಮ್ಮ ಜನುಮದಿನ ಆಚರಸಿಕೊಳ್ಳುತ್ತಾರೆ. ಆದರೆ ಬಸವರಾಜ ತಲ್ಲೂರ ಅವರು ಸ್ವಚ್ಛತಾ ಕಾರ್ಯದ ಮೂಲಕ, ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿರುವುದು ಬಹಳ ಖುಷಿತಂದಿದೆ. ಈ ರೀತಿಯ ಹುಟ್ಟು ಹಬ್ಬವು ಎಲ್ಲರಿಗೂ ಮಾದರಿ ಎಂದರು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

ಎಸ್ ಅರ್ ತಲ್ಲೂರ್ ಪೌಂಡೇಶನ್ ಕಾರ್ಯದರ್ಶಿ ಡಾ.‌ಸುಮಾ ತಲ್ಲೂರ, ಪರಿಸರ ಪ್ರೇಮಿ ಪ್ರಭು ಕೊಂಗಿ, ಸದಸ್ಯ ಮಹೇಶ ತಲ್ಲೂರ, ಶ್ರೀನಗರದ ನಿವಾಸಿಗಳು ಹಾಗೂ ವಿದ್ಯಾರ್ಥಿಬಳಗ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X