ರಾಯಚೂರು | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ದಸಂಸ ಒತ್ತಾಯ

Date:

Advertisements

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು.

“ಪಟ್ಟಣದಲ್ಲಿ ಸಾವಿರಾರು ಜನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ವಾಸಿಸುತ್ತಿದ್ದಾರೆ. ಸದರಿ ಪಟ್ಟಣದಲ್ಲಿ ಅಂಬೇಡ್ಕರ್ ಭವನದ ಅವಶ್ಯಕತೆ ಇದ್ದು, ಭವನ ನಿರ್ಮಾಣ ಮಾಡುವುದು ಪಟ್ಟಣದ ಬಹುಜನರ ಬೇಡಿಕೆಯಾಗಿದೆ. ಈಗಾಗಲೇ ಹಟ್ಟಿ ಪಟ್ಟಣದ ಬುದ್ದಿನ್ನಿ ಲೇಔಟ್‌ನಲ್ಲಿ ಸ್ಥಳ ಕೂಡಾ ಬಹಳಷ್ಟು ವರ್ಷಗಳಿಂದ ಮೀಸಿಲಿರಿಸಿದ್ದು, ಇಲ್ಲಿಯವರೆಗೂ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಸ್ಥಳ ಮೀಸಲಿಟ್ಟು ಬಹಳ ವರ್ಷಗಳೇ ಕಳೆದರೂ ಭವನದ ವಿಚಾರದಲ್ಲಿ ಮೀನಾಮೇಷ ಎಣಿಸುವುದು ದೇಶದ ಸಂವಿಧಾನ ಶಿಲ್ಪಿಗೆ ಮಾಡುವ ಅತೀ ದೊಡ್ಡ ಅಗೌರವ ಎನಿಸಿಕೊಳ್ಳುತ್ತದೆ. ಅವರಿಗೆ ಸೂಕ್ತ ಗೌರವ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

Advertisements

ಠರಾವ್ ಪಾಸ್ ಮಾಡದೇ ಹೋದಲ್ಲಿ ಮುಂದೆ ನಡೆಯುವ ಹೋರಾಟಕ್ಕೆ ತಾವೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.‌ ಈ ವೇಳೆ ಯಲ್ಲಪ್ಪ ಮಾಚನೂರು, ಪ್ರಶಾಂತ ದೀನ ಸಮುದ್ರ ಇನ್ನಿತರರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X