ಎಲ್ಲ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ

Date:

Advertisements

ಟೀಂ ಇಂಡಿಯಾದ ಬ್ಯಾಟರ್‌ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹಾ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ ವೃದ್ಧಿಮಾನ್ ಸಾಹಾ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ. ಈ ವೇಳೆ 142 ಪಂದ್ಯಗಳನ್ನಾಡಿರುವ ಅವರು 14 ಶತಕಗಳೊಂದಿಗೆ ಒಟ್ಟು 7169 ರನ್ ಕಲೆಹಾಕಿದ್ದಾರೆ.

ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್ ಪೇರಿಸಿದ್ದಾರೆ.

Advertisements

ಹಾಗೆಯೇ ಭಾರತದ ಪರ 9 ಏಕದಿನ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ಸಾಹ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 2014 ರ ಬಳಿಕ ಅವರಿಗೆ ಭಾರತ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಬುಮ್ರಾ ಭಾಜನ: ಮೊದಲ ಭಾರತೀಯ ಬೌಲರ್‌ ಎಂಬ ಹಿರಿಮೆ

ಇನ್ನು 2021ರವರೆಗೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಇದೀಗ ತಮ್ಮ 40ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಸಹಾ ತಮ್ಮ ಕೊನೆಯ ಪಂದ್ಯದಲ್ಲಿ ವಿಶೇಷವಾದುದನ್ನು ಮಾಡಲು ಸಾಧ್ಯವಾಗಲಿಲ್ಲ. ಸಹಾಗೆ ಮೊದಲ ಇನಿಂಗ್ಸ್‌ನಲ್ಲಿ ಸಿಕ್ಸರ್ ಸಿಡಿಸಲು ಸಾಧ್ಯವಾಗಲಿಲ್ಲ. ಅಲ್ಲದೆ, ಪಂದ್ಯವನ್ನು ಇನಿಂಗ್ಸ್‌ನಿಂದ ಗೆದ್ದುಕೊಂಡ ಬಂಗಾಳಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವೂ ಸಿಗಲಿಲ್ಲ. ಬಂಗಾಳ ತಂಡ ಪಂಜಾಬ್ ತಂಡವನ್ನು 1 ಇನಿಂಗ್ಸ್ ಮತ್ತು 13 ರನ್‌ಗಳಿಂದ ಸೋಲಿಸಿತು.

“ಈಗ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುವ ಸಮಯ. ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮನ್ನು ಮೀಸಲಿಡುವ ಸಮಯ. ಕ್ರಿಕೆಟ್‌ ಆಡುವ ಸಮಯದಲ್ಲಿ ಸಾಧ್ಯವಾಗದ ಆ ಕ್ಷಣಗಳನ್ನು ಬದುಕಲು ಮತ್ತು ಅನುಭವಿಸಲು ನಾನು ಬಯಸುತ್ತೇನೆ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X