ಶಿವಮೊಗ್ಗ | ಶರಣರ ಜಯಂತಿ ಯಶಸ್ಸಿಗೆ ಶ್ರಮಿಸಲು ಸಮಗಾರರ ಸಭೆ ನಿರ್ಧಾರ

Date:

Advertisements

ಫೆ.10ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯುವ ಕಾಯಕ ಶರಣರ ಜಯಂತಿಯನ್ನು ಅದ್ದೂರಿಯಾಗಿ ನೆರವೇರಿಸಲು ಸಮಸ್ತ ಸಮಗಾರ ಬಾಂಧವರು ಸಹಕರಿಸುವುದಾಗಿ ಜಿಲ್ಲಾ ಸಮಗಾರರ ಹಿತರಕ್ಷಣಾ ವೇದಿಕೆ ನಿರ್ಧರಿಸಿದೆ.

ಶಿವಮೊಗ್ಗ ನಗರದ ಆರ್‌ಟಿಒ ರಸ್ತೆಯ ಸರ್ಕಾರಿ ನೌಕರರ ಎಸ್ಸಿ/ಎಸ್ಟಿ ಭವನದಲ್ಲಿ ಶನಿವಾರ ವೇದಿಕೆಯ ಸಭೆ ನಡೆಯಿತು. ಜಯಂತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಸಕ್ತರು ತಮ್ಮ ಹೆಸರುಗಳನ್ನು ನೋಂದಾಯಿಸಲು ಸೂಚಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ವಹಿಸಿದ್ದರು. ಜಿಲ್ಲೆಯ ಸಮಸ್ತ ಸಮಗಾರರ ಅಭಿವೃದ್ಧಿಯ ಬಗ್ಗೆ, ವೇದಿಕೆಯ ಎಲ್ಲ ತಾಲೂಕು ಅಧ್ಯಕ್ಷರು, ಗ್ರಾಮ ಅಧ್ಯಕ್ಷರು ಮತ್ತು ಜಿಲ್ಲಾ ಮಟ್ಟದ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಿತು.

Advertisements

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ದೇಶದ ಶೇ. 80ರಷ್ಟು ಸಂಪತ್ತು ಮೇಲ್ವರ್ಗಗಳ ಕೈಯಲ್ಲಿದೆ: ಎಸ್ ಮೂರ್ತಿ

ಈ ವೇಳೆ ವೇದಿಕೆಯ ಕಾರ್ಯದರ್ಶಿ ಗೋವಿಂದ ನಾಯ್ಕ, ಖಜಾಂಚಿ ಗೋಪಾಲ ಕದಂ, ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಕಾರ್ಯದರ್ಶಿ ಅಶೋಕ್ ಕುಮಾರ್ ಎಜೆ, ಸಹ ಕಾರ್ಯದರ್ಶಿ ಶಿವಾನಂದ, ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಸದಸ್ಯರಾದ ಕೆ.ಗಣೇಶ್, ಕಲ್ಲೇಶ್ ಪಿ ಖಾನಪೇಟ್, ಜಯಂತ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X