ಪತ್ನಿಯ ತಂಗಿಯನ್ನು ಅತ್ಯಾಚಾರವೆಸಗಿ ಕೊಲ್ಲಲು 40 ಸಾವಿರ ರೂ. ಸಾಲ

Date:

Advertisements

ತನ್ನ ಪತ್ನಿಯ ತಂಗಿಯನ್ನೇ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲು 40,000 ರೂಪಾಯಿ ಸಾಲ ಮಾಡಿ ಇದಕ್ಕಾಗಿ ಇಬ್ಬರು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಜನವರಿ 21 ರಂದು ಉತ್ತರ ಪ್ರದೇಶದ ಮೀರತ್‌ನ ನಾನು ಕಾಲುವೆ ಬಳಿ ಈ ಘಟನೆ ನಡೆದಿದ್ದು, ಪೊಲೀಸರ ಪ್ರಕಾರ, ಸಂತ್ರಸ್ತೆಯನ್ನು ಕತ್ತು ಹಿಸುಕಿ ಸಾಯಿಸುವ ಮೊದಲು ಆಕೆಯ ಅಕ್ಕನ ಗಂಡ ಮತ್ತು ಇತರ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಆಶಿಶ್ ಎಂಬಾತ ತನ್ನ ಪತ್ನಿಯ ತಂಗಿಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ತನ್ನನ್ನು ಬೆದರಿಕೆ ಮಾಡುತ್ತಿದ್ದಳು ಎಂದು ಆರೋಪಿಸಿ ಕೊಲೆಗೆ ಯೋಜನೆ ರೂಪಿಸಿದ್ದ. ಆಸ್ಪತ್ರೆಯಲ್ಲಿ ಕೆಲಸಗಾರರಾಗಿದ್ದ ಶುಭಂ ಮತ್ತು ಇನ್ನೊಬ್ಬ ಸಹವರ್ತಿ ದೀಪಕ್ ಎನ್ನುವ ಇಬ್ಬರ ಸಹಾಯ ಕೋರಿದ್ದ. 30,000 ರೂ.ಪಡೆದು ಆಕೆಯನ್ನು ಕೊಲೆ ಮಾಡಲು ಒಪ್ಪಿಕೊಂಡಿದ್ದರು ಎಂದು ಮುಜಾಫರ್‌ನಗರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಬನ್ಸಾಲ್ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸುಳ್ಳು ಜಾಹೀರಾತು | ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

ಪ್ರಮುಖ ಆರೋಪಿ ಆಶಿಶ್ 40,000 ರೂಪಾಯಿ ಸಾಲವನ್ನು ಮಾಡಿ, ಮುಂಗಡವಾಗಿ 10,000 ರೂ. ಮತ್ತು ಕೊಲೆಯ ನಂತರ
20,000 ರೂಪಾಯಿಗಳನ್ನು ಪಾವತಿಸಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆಶಿಶ್, ಶುಭಂ ಮತ್ತು ದೀಪಕ್ ಮಹಿಳೆಯನ್ನು ಸ್ಕೂಟರ್‌ನಲ್ಲಿ ಕಾಲುವೆ ಬಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿ, ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಹತ್ಯೆ ಮಾಡಿ ಮೃತ ದೇಹವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾರೆ.

ಸಂತ್ರಸ್ತೆಯ ಕುಟುಂಬ ಜನವರಿ 23 ರಂದು ಪುತ್ರಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದು, ತನಿಖೆಯ ಸಮಯದಲ್ಲಿ, ಆಶಿಶ್,
ಶುಭಂ ಮತ್ತು ದೀಪಕ್ ಅವರೊಂದಿಗೆ ಆಕೆ ಕೊನೆಯದಾಗಿ ಕಾಣಿಸಿಕೊಂಡಿದ್ದಾಳೆ ಎಂದು ಪೊಲೀಸರು ಕಂಡುಕೊಂಡರು.

ಅಧಿಕಾರಿಗಳು ಆಶಿಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣದ ಇತರ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಫೋರೆನ್ಸಿಕ್ ತಂಡಗಳು ಯುವತಿಯ ಅವಶೇಷಗಳು, ಸುಟ್ಟ ಬಟ್ಟೆಗಳು, ಉಂಗುರ ಮತ್ತು ಇತರ ವಸ್ತುಗಳನ್ನು ಸ್ಥಳದಿಂದ
ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಳಸಿದ ಮತ್ತು ಬಳಸದ ಕಾಂಡೋಮ್ ಸಹ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X