ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ಸಭೆ; ಸ್ಥಳೀಯ ವ್ಯಾಪಾರಿಗಳ ರಕ್ಷಣೆಗೆ ಆಗ್ರಹ

Date:

Advertisements

ಹೊರ ರಾಜ್ಯಗಳಿಂದ ಬಂದಿರುವ ವ್ಯಾಪಾರಿಗಳಿಂದ ಶಿವಮೊಗ್ಗ ನಗರದ ಸ್ಥಳೀಯ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದ್ದು, ಸಾರ್ವಜನಿಕರು ಓಡಾಡಲೂ ಜಾಗವಿಲ್ಲದಂತಾಗಿದೆ. ಪಾಲಿಕೆ ಅಧಿಕಾರಿಗಳು ಇದನ್ನು ಪರಿಶೀಲಿಸಿ ಸ್ಥಳೀಯ ವ್ಯಾಪಾರಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಶಿವಮೊಗ್ಗ ನಗರದ ಮೇನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಬೆಳಿಗ್ಗೆ ನಡೆದ ಮಾಸಿಕ ಸಭೆಯಲ್ಲಿ ಚರ್ಚಿಸಿದರು.

“ಶಿವಮೊಗ್ಗ ಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೆ ನಗರದ ವಿವಿಧ ಕಡೆ ವ್ಯಾಪಾರಿಗಳು ದಿಢೀರನೆ ಪ್ರತ್ಯಕ್ಷರಾಗುತ್ತಿದ್ದು, ಇವರು ಪಾಲಿಕೆ ನಿಯಮಗಳನ್ನು ಪಾಲಿಸದೇ ಇರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಇವರ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರೂ ಕೂಡಾ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ರಸ್ತೆ ಅಪಘಾತ ಹೆಚ್ಚಳ; ಸಂಚಾರಿ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ಈ ವೇಳೆ ಚನ್ನವೀರಪ್ಪ ಗಾಮನಗಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದು, ಸಂಘಟನೆಯ ಪ್ರಮುಖರಾದ ಜೆ ಸಿ ನಾಗರಾಜ್, ಸತ್ಯಮೂರ್ತಿ, ಕಿರಣ್, ಶಿಲ್ಪ, ಕುಸುಮ ಸಂತೋಷ, ಅನ್ವರ್ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X