ಗೌರಿಬಿದನೂರು | ಪ್ರಶ್ನಿಸದೇ ಒಪ್ಪಬೇಡಿ ಎಂದಿದ್ದ ಗಾಂಧೀವಾದಿ ಡಾ. ಹೆಚ್ ಎನ್, ಸಮಾಜದ ದೊಡ್ಡಶಕ್ತಿ

Date:

Advertisements

ಹೆಚ್.ನರಸಿಂಹಯ್ಯ ಅವರು ಓದಿರುವ ಗೌರಿಬಿದನೂರು ತಾಲೂಕಿನ ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2020ಕ್ಕೆ 100 ವರ್ಷ ತುಂಬಿದೆ. ಇಲ್ಲಿನ ವಿದ್ಯಾರ್ಥಿ ಹೆಚ್.ಎನ್. ಅವರಿಗೆ ಕೂಡ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕೋವಿಡ್‌ ಕಾರಣ ಮುಂದೂಡಿದ್ದ ಶಾಲೆಯ ಶತಮಾನೋತ್ಸವ ಹಾಗೂ ಪದ್ಮಭೂಷಣ ಡಾ.ಹೆಚ್.ಎನ್.ಅವರ ಜನ್ಮಶತಮಾನೋತ್ಸವವನ್ನು ಇದೀಗ 2025ರ ಫೆ.2ರಂದು ಆಚರಿಸುವ ಮೂಲಕ ಹುಟ್ಟೂರಿನಲ್ಲಿ ಗೌರವ ನಮನ ಸಲ್ಲಿಸಿದ್ದು ವಿಶೇಷಗಳಲ್ಲಿ ವಿಶೇಷ.

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದ ಹೆಚ್.ನರಸಿಂಹಯ್ಯ ಅಪ್ಪಟ ಗಾಂಧೀವಾದಿ. ಕನ್ನಡ ನಾಡಿನ ಸಾಮಾಜಿಕ ಶೈಕ್ಷಣಿಕ ವೈಚಾರಿಕ ವಲಯಕ್ಕೆ ಸದಾ ಚಿರಪರಿಚಿತರು. ಕಡು ಬಡತನದಲ್ಲಿ ಹುಟ್ಟಿ ಬೆಳೆದರೂ ಸಾಧಿಸುವ ಛಲ ಮತ್ತು ಅವಿರತ ಹೋರಾಟ ಸಾಧನೆಗಳ ಮೂಲಕವೇ ಮನೆಮಾತಾಗಿದ್ದು ಇಂದಿಗೆ ಇತಿಹಾಸ.

ಫೆ.20, 1920ರಲ್ಲಿ ಗೌರಿಬಿದನೂರು ತಾಲೂಕು ಹೊಸೂರು ಗ್ರಾಮದಲ್ಲಿ ಹುಟ್ಟಿದ ಹೆಚ್.ಎನ್ ಅವರಿಗೆ 2020ಕ್ಕೆ ಶತಮಾನೋತ್ಸವ ಸಂಭ್ರಮ, ಅಂತೆಯೇ ಅವರು ಓದಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೂ ಕೂಡ 100 ವರ್ಷಗಳ ಸಾರ್ಥಕ ಸಂಭ್ರಮ.

Advertisements

ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ ಎಂದು ನಂಬಿದ್ದ ಹೆಚ್.ಎನ್.ನ್ಯಾಷನಲ್ ಕಾಲೇಜು ಸಂಸ್ಥೆ ವತಿಯಿಂದಲೇ 11 ಶಾಲಾ ಕಾಲೇಜುಗಳನ್ನು ನಡೆಸಿದ ಕೀರ್ತಿವಂತರು. ಇದರಲ್ಲಿ ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ಎರಡು ಕಾಲೇಜು, ನಾಲ್ಕು ಪ್ರೌಢಶಾಲೆಗಳಿರುವುದು ನಮ್ಮ ಹೆಮ್ಮೆ.

WhatsApp Image 2025 02 03 at 10.54.59 AM 2

ಸಮಾಜಸೇವೆ, ಶಿಕ್ಷಣ, ಹಾಗೂ ವಿಜ್ಞಾನ ಅವರಿಗೆ ಪ್ರಿಯವಾದ ಕ್ಷೇತ್ರಗಳು. ಬಾಲ್ಯದಿಂದಲೂ ಖಾದಿ ಮತ್ತು ಸರಳ ಜೀವನವನ್ನು ಮೈಗೂಡಿಸಿಕೊಂಡವರು. ಗ್ರಾಮೀಣ ಭಾಗದ ದೀನ ದಲಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಇವರು ವಿದ್ಯಾರ್ಥಿ ದಿಸೆಯಿಂದಲೂ ಸಮಾಜ ಸೇವೆಗೆ ಸದಾ ಮುಂದು. ಕುಲದ ಬೆಂಬಲವೇ ಇಲ್ಲದ ಹೆಚ್.ಎನ್. ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಜ್ಞಾನ ಭಾರತಿ ಕಟ್ಟಿದ್ದು ಅವರಿಗಿದ್ದ ಸಾಮರ್ಥ್ಯದ ಪ್ರತೀಕ. ಈ ವೇಳೆ ಅತೀಂದ್ರಿಯ ಘಟನೆಗಳ ಸತ್ಯಶೋಧನೆಗಾಗಿ ತಮ್ಮ ಅಧ್ಯಕ್ಷತೆಯಲ್ಲಿಯೇ ಸತ್ಯಶೋಧನಾ ಸಮಿತಿ ರಚಿಸಿ ಮೌಢ್ಯತೆ ಹಾಗೂ ಕಪಟಗಳ ವಿರುದ್ಧ ಸಮರವನ್ನು ಸಾರಿದ್ದರು.

ವಿದ್ಯಾರ್ಥಿ ದೆಸೆಯಲ್ಲಿಯೇ 1942ರಲ್ಲಿ ಕ್ವಿಟ್‌ಇಂಡಿಯಾ ಚಳವಳಿಯಲ್ಲಿ ಭಾಗವಹಿಸುವ ಮೂಲಕ ಮಹಾತ್ಮಾ ಗಾಂಧೀಜಿ ಪ್ರಭಾವಕ್ಕೆ ಒಳಗಾಗಿ ಆನರ್ಸ್‌ಗೆ ವಿಧಾಯ ಹೇಳಿ ಬೆಂಗಳೂರಿನ ಸೆಂಟ್ರಲ್ ಜೈಲು, ಮೈಸೂರು ಜೈಲುಗಳಲ್ಲಿ ಶಿಕ್ಷೆಗೆ ಗುರಿಯಾದರು. ಬೆಂಗಳೂರಿನಲ್ಲಿ ಓದುವಾಗ ವಾರಾನ್ನ ತಿಂದು ಶಿಕ್ಷಣ ಮುಂದುವರೆಸಿದ ಛಲಗಾರ. ಬೆಂಗಳೂರಿನ ರಾಮಕೃಷ್ಣ ಆಶ್ರಮದಲ್ಲಿ ಓದಿ ಗುರುಗಳ ಪ್ರೀತಿಪಾತ್ರರಾದ ಪುಸ್ತಕ ಪ್ರೇಮಿ. ಪ್ರಶ್ನಿಸದೇ ಯಾವುದನ್ನೂ ಒಪ್ಪಬೇಡಿ ಎನ್ನುವ ಮೂಲಕ ವೈಜ್ಞಾನಿಕತೆ, ವಿಚಾರವಾದಕ್ಕೆ ದೊಡ್ಡ ಶಕ್ತಿಯಾಗಿದ್ದವರು.

WhatsApp Image 2025 02 03 at 11.14.56 AM
ಡಾ.ಹೆಚ್.ಎನ್‌ ಅಮರಧಾಮಕ್ಕೆ ಅತಿಥಿ ಗಣ್ಯರಿಂದ ಪುಷ್ಪನಮನ

ಪುಟ್ಟಪರ್ತಿಯ ಸತ್ಯಾಸಾಯಿಬಾಬಾ ಅವರನ್ನು ನೀವು ಪವಾಡಪುರುಷರೇ ಆಗಿದ್ದಲ್ಲಿ ಕುಂಬಳಕಾಯಿ ಸೃಷ್ಟಿಸಿ ಕೊಡುವಂತೆ ಕೇಳಿದ್ದು, ಶಿಬಾಲಯೋಗಿಗಳ ಜತೆಗೆ ನಡೆಸಿದ ತಾತ್ವಿಕ ಸಂಘರ್ಷಗಳು, ಹೆಚ್.ಎನ್.ಅವರಿಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮನ್ನಣೆ ತಂದುಕೊಟ್ಟವು. ಅಲ್ಲದೆ ಅಮೆರಿಕಾದಲ್ಲಿರುವ ಅತೀಂದ್ರಿಯ ಘಟನೆಗಳ ವೈಜ್ಞಾನಿಕ ವಿಶ್ಲೇಷಣೆಗಾಗಿ ಇರುವ ಅಂತರಾಷ್ಟ್ರೀಯ ಸಮಿತಿ ಸದಸ್ಯತ್ವ ಪಡೆದ ಮೊದಲ ಭಾರತೀಯರೆನಿಸಿದ್ದರು.

ಆಂಗ್ಲ ವ್ಯಾಮೋಹವಿರುವ ಬೆಂಗಳೂರಿನ ಬಸವನಗುಡಿ, ವಿ.ವಿ.ಪುರಂ ಶಂಕರ ಮಠಗಳು ಕೂಡುವ ಸಂಗಮ ಸ್ಥಳದಲ್ಲಿ ಕನ್ನಡ ಶಾಲೆಯನ್ನು ತೆರೆದು ತಮ್ಮ ಜೀವಿತಾವಧಿಯುದ್ದಕ್ಕೂ ಯಶಸ್ವಿಯಾಗಿ ನಡೆಸಿಕೊಂಡು ಬರುವ ಮೂಲಕ ಮಾತೃಭಾಷಾ ಪ್ರೇಮ ಮೆರೆದಿದ್ದು ಸಾಮಾನ್ಯ ಸಂಗತಿಯಲ್ಲ. ವಿಜ್ಞಾನವನ್ನು ಜನಪ್ರಿಯಗೊಳಿಸಲು, ವೈಚಾರಿಕ ಮನೋಭಾವನೆಯನ್ನು ಸಾರ್ವಜನಿಕರ ಬದುಕಿನ ಭಾಗವಾಗಿಸಲು ಬೆಂಗಳೂರು ಸೈನ್ಸ್ ಫೋರಂ(ಬೆಂಗಳೂರು ವಿಜ್ಞಾನ ಕೇಂದ್ರ) ಕಟ್ಟಿ, ಈ ಮೂಲಕ 1400ಕ್ಕೂ ಹೆಚ್ಚು ಯಶಸ್ವೀ ಉಪನ್ಯಾಸ ಮಾಲಿಕೆ ನಡೆಸಿಕೊಟ್ಟು, ಹಲವು ಪುಸ್ತಕ ಪ್ರಕಟಣೆ ಮಾಡಿಸಿದ್ದರು. ಇಂತಹ ಹೆಚ್.ಎನ್. ಕರ್ನಾಟಕ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

WhatsApp Image 2025 02 03 at 11.14.55 AM 1
ಶತಮಾನೋತ್ಸವ ಸಮಾರಂಭದಲ್ಲಿ ನೆರೆದಿದ್ದ ಜನಸಮೂಹ

1995-96ರವರೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಸೇವೆ ಸ್ಮರಣೀಯವಾದದ್ದು. ಭೌತಶಾಸ್ತ್ರದ ಪ್ರಾಧ್ಯಾಪಕರಾದರೂ ವಿನೋಧ ಪ್ರಿಯರಾಗಿದ್ದರು. ವಿಜ್ಞಾನ ಮತ್ತು ವೈಚಾರಿಕತೆ ಸಂಬಂಧ ಅನೇಕ ಲೇಖನಗಳನ್ನು ಬರೆದಿದ್ದು ಹಲವು ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿವೆ. ಪದವಿ ಪ್ರಶಸ್ತಿಗಳ ಬೆನ್ನತ್ತಿ ಹೋಗದ ಹೆಚ್.ಎನ್‌ ಅವರನ್ನು ಅರಸಿಕೊಂಡು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ತಾಮ್ರ ಪತ್ರ, ಕೇಂದ್ರ ಸರಕಾರದ ಪದ್ಮಭೂಷಣ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿಗಳೇ ತಮ್ಮ ಅವಿರತ ಹೋರಾಟ, ಸರಳತೆ ಸಜ್ಜನಿಕೆಯ ಹೋರಾಟಕ್ಕೆ ಹಿಡಿದ ಕನ್ನಡಿಯಾಗಿವೆ.

ಇದನ್ನೂ ಓದಿ : ಗೌರಿಬಿದನೂರು | ಡಾ.ಎಚ್.ಎನ್‌ ಸರಳತೆಯ ಜೀವನ ಸಕಲರಿಗೂ ಮಾದರಿ ; ನಾಡೋಜ ಹಂಪ ನಾಗರಾಜಯ್ಯ

ಚಿಕ್ಕಬಳ್ಳಾಪುರ ಜಿಲ್ಲೆಯ ಅನರ್ಘ್ಯ ರತ್ನವಾಗಿರುವ ಹೆಚ್.ನರಸಿಂಹಯ್ಯ ಅವರು 84 ವರ್ಷಗಳ ಕಾಲ ಬ್ರಹ್ಮಚಾರಿಯಾಗಿಯೇ ಜೀವಿಸಿ 2015ರಲ್ಲಿ ಇಹಲೋಕ ತ್ಯಜಿಸಿ ಹುಟ್ಟೂರಿನ ಅಮರಧಾಮದಲ್ಲಿ ಐಕ್ಯರಾಗಿದ್ದಾರೆ. ಅಧ್ಯಾಪಕ ಆಡಳಿತಗಾರ, ಸ್ನೇಹಮಯಿ, ಮಾನವತಾವಾದಿ, ವಿಚಾರವಾದಿಯ ಜನ್ಮಶತಮಾನೋತ್ಸವಕ್ಕೆ ಹೊಸೂರು ಭಾಜನವಾಗಿದೆ. ಸಮಾರಂಭದ ಕರ್ತೃಗಳಾದ ಹಳೆಯ ವಿದ್ಯಾರ್ಥಿಗಳ ಸಂಘ ಕಾರ್ಯಕ್ರಮದ ಯಶಸ್ಸಿಗೆ ಹಗಲಿರುಳು ಶ್ರಮಿಸಿದೆ. ಬರಪೀಡಿತ ಜಿಲ್ಲೆಗೆ ಮುಖ್ಯಮಂತ್ರಿಗಳು ವಿಶೇಷ ಅನುದಾನ ನೀಡಿ ಇನ್ನಷ್ಟು ಬೆಳವಣಿಗೆ ಕಾಣುವಂತೆ ಮಾಡಲಿ ಎನ್ನುವುದೇ ಎಲ್ಲರ ಸದಾಶಯವಾಗಿದೆ.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X