ವಿಜಯಪುರ | ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸೂಕ್ತ ಕ್ರಮಕ್ಕೆ ಕರಾಸ ಆಗ್ರಹ

Date:

Advertisements

ಮೈಕ್ರೋ ಫೈನಾನ್ಸ್ ಬ್ಯಾಂಕುಗಳ ಕಿರುಕುಳ ಹೆಚ್ಚಾಗಿದ್ದು, ಅಮಾಯಕರು ಆತ್ಮಹತ್ಯೆ ದಾರಿಹಿಡಿಯುತ್ತಿದ್ದಾರೆ. ಹಾಗಾಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಜಯಪುರ ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಿತು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಬ್ಯಾಂಕುಗಳು ತೀವ್ರತರದಲ್ಲಿ ಬಡ್ಡಿ, ಚಕ್ರ ಬಡ್ಡಿಯನ್ನು ವಿಧಿಸುವುದರ ಮೂಲಕ ಸಾಲ ಪಡೆದ ಬಡ ಕೂಲಿ ಕಾರ್ಮಿಕರಿಗೆ, ವ್ಯಾಪಾರಸ್ಥರಿಗೆ ಗ್ರಾಮೀಣ ಭಾಗದ ಜನತೆಗೆ ಆರ್‌ಬಿಐ ನಿಯಮಾವಳಿಗಳನ್ನೂ ಮೀರಿ ಕಿರುಕುಳ ನೀಡುವುದರ ಮೂಲಕ ಜಿಲ್ಲೆಯ ಜನತೆ ಗುಳೆ ಹೋಗುವಂತೆ ಮಾಡುತ್ತಿದೆ. ಅದು ಅಲ್ಲದೆ ಮೈಕ್ರೋ ಫೈನಾನ್ಸ್ ವಸೂಲಿಗಾರರ ಕಿರುಕುಳದಿಂದಾಗಿ ಬಹುತೇಕ ಬಡ ಹೆಣ್ಣು ಮಕ್ಕಳು, ರೈತಾಪಿ ವರ್ಗ, ಕಾರ್ಮಿಕರು ಪ್ರಾಣ ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“ಮೈಕ್ರೋ ಫೈನಾನ್ಸ್ ಬ್ಯಾಂಕಿನ ಸಿಬ್ಬಂದಿಗಳು ಒಡ್ಡುವ ದಬ್ಬಾಳಿಕೆ, ಜೀವ ಬೆದರಿಕೆ, ಮನೆ ಜಪ್ತಿ ಮಾಡುವುದು, ಸಾರ್ವಜನಿಕವಾಗಿ ನಿಂದಿಸುವ ಮತ್ತು ಮಾನಹಾನಿ ಮಾಡಿ ಆತ್ಮಹತ್ಯೆಗೆ ಪ್ರಚೋದಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದಾಗಿ ಇಂತಹ ಫೈನಾನ್ಸ್ ಕಂಪನಿಗಳನ್ನು ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಿ ರದ್ದುಗೊಳಿಸಿ ಜಿಲ್ಲೆಯ ಜನತೆಯ ರಕ್ಷಣೆಗೆ ಸೂಕ್ತ ಕಾನೂನು ಜಾರಿಗೊಳಿಸಬೇಕು” ಎಂದು ಮನವಿ ಮಾಡಿತು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ವಿಕ್ರಮ ವಾಘಮೋರೆ ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ತಿಪ್ಪಣ್ಣ ಹೆಬ್ಬಾಳ, ಹಮಿದ ಇನಾಮದಾರ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X