ಕುಂಭಮೇಳದಲ್ಲಿ ಕಾಲ್ತುಳಿತ: ದುರದೃಷ್ಟಕರ ಎಂದ ಸುಪ್ರೀಂ ಕೋರ್ಟ್

Date:

Advertisements

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯನ್ನು ಸೋಮವಾರ ದುರದೃಷ್ಟಕರ ಎಂದು ಕರೆದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ.

ಅರ್ಜಿದಾರ ವಕೀಲ ವಿಶಾಲ್ ತಿವಾರಿ ಅವರಿಗೆ ಅಲಹಾಬಾದ್ ಹೈಕೋರ್ಟ್‌ಗೆ ಹೋಗುವಂತೆ ನ್ಯಾಯಾಲಯವು ತಿಳಿಸಿದೆ.

“ಇದೊಂದು ದುರದೃಷ್ಟಕರ ಘಟನೆ. ಈಗಾಗಲೇ ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ. ಈ ಕುರಿತು ಹೈಕೋರ್ಟ್ ಸಂಪರ್ಕಿಸಿ,” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಕಾಲ್ತುಳಿತ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶಾಲ್ ತಿವಾರಿ ಅವರಿಗೆ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಹಿಳಾ ಸಂಘಟನೆಗಳಿಂದ ಮೌನ ಜಾಗೃತಿ ಅಭಿಯಾನ

ರಾಜ್ಯವನ್ನು ಪ್ರತಿನಿಧಿಸಿದ ಹಿರಿಯ ನ್ಯಾಯವಾದಿ ಮುಕುಲ್ ರೋಹ್ಟಗಿ, ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನೂ ಅವರು ಉಲ್ಲೇಖಿಸಿದರು.

ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮಹಾ ಕುಂಭಮೇಳದಲ್ಲಿ, ವಿಶೇಷವಾಗಿ ಮೌನಿ ಅಮವಾಸ್ಯೆಯಂದು ಕಾಲ್ತುಳಿತವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ವಾದಿಸಿದರು. ಆಡಳಿತದಲ್ಲಿ ಲೋಪಗಳಾಗಿವೆ, ಕುಂಭಮೇಳದಲ್ಲಿ ಭಕ್ತರಿಗಾಗಿ ಮೀಸಲಾದ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕೆಂದು ಅವರು ಒತ್ತಾಯಿಸಿದರು.

ಅರ್ಜಿದಾರರು ಎಲ್ಲ ರಾಜ್ಯಗಳು ಜನಸಂದಣಿ ನಿರ್ವಹಣಾ ನೀತಿಗಳನ್ನು ಸುಧಾರಿಸಲು ನಿರ್ದೇಶಿಸುವಂತೆ ನ್ಯಾಯಾಲಯವನ್ನು ಕೋರಿದರು. ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ವಿವಿಧ ರಾಜ್ಯಗಳ ವೈದ್ಯಕೀಯ ತಂಡಗಳನ್ನು ನಿಯೋಜಿಸುವಂತೆ ಆದೇಶಿಸುವಂತೆ ನ್ಯಾಯಾಲಯವನ್ನು ಕೋರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X