ಗೂಂಡಾ ಸಿದ್ದರಾಮಯ್ಯನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ: ಶಾಸಕ ಯತ್ನಾಳ್

Date:

Advertisements
  • ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಘೋಷಿಸಲಿ : ಯತ್ನಾಳ್‌ ಸವಾಲು
  • ʼಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆʼ

ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಈ ಗೂಂಡಾನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಸಿದ್ದರಾಮಯ್ಯ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದ್ದು, “ಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಗೆಲುವು ಸುಲಭವಲ್ಲ” ಎಂದಿದ್ದಾರೆ.

“ಐದು ವರ್ಷಗಳ ಕಾಲ ಸಿಎಂ ಆಗಿದ್ದವರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯರನ್ನು ಯಾವುದೇ ಕಾರಣಕ್ಕೂ ಸಿಎಂ ಮಾಡಲ್ಲ. ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯರನ್ನು ಬಲಿಪಶು ಮಾಡಲಿದ್ದಾರೆ” ಎಂದು ಭವಿಷ್ಯ ನುಡಿದಿದ್ದಾರೆ.

Advertisements

ಮೀಸಲಾತಿ ಇವರಪ್ಪನ ಮನೆಯದ್ದಾ?

ಮೀಸಲಾತಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತ್ನಾಳ್‌, ಮುಸ್ಲಿಮರು ಮೂರು ಕಡೆಗಳಲ್ಲಿ ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. ಮೀಸಲಾತಿ ಇವರಪ್ಪನ ಮನೆಯದ್ದಾ? ಮುಸ್ಲಿಮರಿಗೆ ಒಂದೇ ಕಡೆ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಇನ್ನೂ ಶೇ. 2 ರಷ್ಟು ಮೀಸಲಾತಿ ಹೆಚ್ಚು ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದ್ದಾರೆ ಎಂದು ಪ್ರಶ್ನಿಸಿದಾಗ, “ಬಿಜೆಪಿಯ ಐತಿಹಾಸಿಕ ನಿರ್ಣಯದಿಂದ ಕಾಂಗ್ರೆಸ್ ಈಗ ಅಲುಗಾಡಿ ಹೋಗಿದೆ. ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಿ” ಎಂದು ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X