ಬಿಜೆಪಿ ಸರ್ಕಾರ ಕಾನೂನು ಉಲ್ಲಂಘಿಸಿ ಆರ್‌ಎಸ್‌ಎಸ್‌ಗೆ ಭೂಮಿ ನೀಡಿದೆ: ದಿನೇಶ್ ಗುಂಡೂರಾವ್

Date:

Advertisements
  • ಬಿಜೆಪಿ ಸರ್ಕಾರದ ಭೂ ಅಕ್ರಮ ಬಂಡವಾಳ ತೆರೆದಿಟ್ಟ ಸಚಿವ ಗುಂಡೂರಾವ್
  • ಸಿಎಂ ಹಾಗೂ ಕಂದಾಯ ಸಚಿವರು ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುತ್ತಾರೆ

ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಯ ಸಲುವಾಗಿ ಹಿಂದಿದ್ದ ಬಿಜೆಪಿ ಸರ್ಕಾರ ಕಾನೂನು ಉಲ್ಲಂಘಿಸಿ ಆರ್‌ಎಸ್‌ಎಸ್‌ ಸಂಸ್ಥೆಗೆ ಅಕ್ರಮ ಭೂ ಹಂಚಿಕೆ ಮಾಡಿರುವುದು ನಿಜ. ಈ ಸಂಬಂಧ ದಾಖಲೆಗಳು ಲಭ್ಯವಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಈ ಅಕ್ರಮ ಪರಭಾರೆ ವಿಚಾರವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಚರ್ಚಿಸಿ ಮುಂದಿನ ಕ್ರಮ ಜರುಗಿಸಲಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ, ತಮ್ಮ ಅಧಿಕಾರದಲ್ಲಿ ದ್ವೇಷವನ್ನ ಬಿತ್ತುವ ಕೆಲಸ ಮಾಡುತ್ತಿದ್ದರು, ಪಠ್ಯಗಳಲ್ಲಿ ಬದಲಾವಣೆ ಮಾಡಿದ್ದೂ ಕೂಡ ಇದೇ ಕಾರಣಕ್ಕೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Advertisements

ಹಿಂದಿನ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಕ್ರಮಗಳಾಗಿದ್ದವು. ಹೀಗಾಗಿ ಈಗಾಗಲೇ ಕೆಲ ಟೆಂಡರ್ ಗಳನ್ನ ರದ್ದುಪಡಿಸಿದ್ದೇವೆ, ಇದರಲ್ಲಿ ಜಿಕೆವಿಕೆ ಸಂಸ್ಥೆಗೆ ನೀಡಿದ್ದ 108 ಗುತ್ತಿಗೆಯನ್ನ ರದ್ದುಪಡಿಸಿದ್ದೇವೆ ಎಂದು ಅವರು ತಿಳಿಸಿದರು.

ಇದಿಷ್ಟೇ ಅಲ್ಲದೆ, ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ, ಹಾಗಾಗಿ ಡಯಾಲಿಸಿಸ್ ಟೆಂಡರ್ ಅನ್ನೂ ರದ್ದುಪಡಿಸಲಾಗಿದೆ, ಈಗ ಜರೂರಾಗಿರುವ ಕೆಲಸಗಳನ್ನ ಮಾಡುತ್ತಿದ್ದೇವೆ, ಇಲಾಖೆಯ ಕಾರ್ಯನಿರ್ವಹಣೆ ಬದಲಾವಣೆ ಕೆಲಸ ನಡೆಯುತ್ತಿದೆ, ಅಧಿಕಾರಿಗಳು, ವೈದ್ಯರ ಕಾರ್ಯನಿರ್ವಹಣೆ ಸರಿಪಡಿಸಬೇಕಿದೆ, ಪಾಲಿಸಿ ವಿಚಾರಗಳನ್ನ ಬದಲಾಯಿಸಬೇಕಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಈ ಸುದ್ದಿ ಓದಿದ್ದೀರಾ? : ಸಾರ್ವಜನಿಕರು ಬೆಂಗಳೂರುವರೆಗೆ ಬರುವುದು ತಪ್ಪಿಸಲು ನಾನೇ ಜನರ ಬಳಿ ಹೋಗುವೆ: ಸಚಿವ ಜಮೀರ್ ಅಹ್ಮದ್

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆ

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆ ನಡೆಸಲು ಸರ್ಕಾರಕ್ಕೆ ತಿಳಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯ ಇರುವುದರಿಂದ ಈ ಬಗ್ಗೆ ತನಿಖೆ ಮಾಡಬೇಕಿದೆ. ಈ ಹಿಂದಿನ ಸರ್ಕಾರ ಆದೇಶಿಸಿದ್ದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ನಮ್ಮ ಸರ್ಕಾರ ಮರು ತನಿಖೆಗೆ ನಿರ್ಧಾರ ಮಾಡಿದೆ, ಇದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ಹೇಳಿದರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X