ಮೈಸೂರು | ಯುವ ಸಮೂಹ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಸಚಿವ ಮಹದೇವಪ್ಪ

Date:

Advertisements

ಇಂದಿನ ಯುವ ಸಮೂಹವು ಓದುವ ಹವ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು ಎಂದು ಸಚಿವ ಡಾ. ಎಚ್‌ ಸಿ ಮಹದೇವಪ್ಪ ಹೇಳಿದರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ ಎನ್ ಲಕ್ಷ್ಮಿ ಅವರ ಅಭಿನಂದನಾ ಸಮಾರಂಭ, ‘ಅರಿವಿನ ಸಿರಿ’ ಅಭಿನಂದನಾ ಗ್ರಂಥ ಹಾಗೂ ನಾಲ್ಕು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣದ ಮೂಲಕ ಪರಿಪೂರ್ಣವಾದ ಸಮಾಜ ನಿರ್ಮಿಸಲು ಸಾಧ್ಯವಿಲ್ಲ. ಓದುವ ಹವ್ಯಾಸದಿಂದ ಮಾತ್ರ ಭೌದ್ಧಿಕವಾಗಿ ಬಲಾಢ್ಯರಾಗಲು ಸಾಧ್ಯ. ದೇಶದಲ್ಲಿರುವ ಅವೈಜ್ಞಾನಿಕತೆಯನ್ನು ತೊಲಗಿಸಲು ಶಿಕ್ಷಣ ಬಹಳ ಮುಖ್ಯ. ವೈಜ್ಞಾನಿಕತೆ ಹಾಗೂ ವೈಚಾರಿಕತೆಯಿಂದ ಕೂಡಿದ ಶಿಕ್ಷಣವು ಮೂಢನಂಬಿಕೆ, ಅನಾಗರಿಕತೆ ಹಾಗೂ ಶೋಷಣೆಯನ್ನು ತೊಡೆದು ಹಾಕುತ್ತದೆ” ಎಂದರು.

WhatsApp Image 2025 02 04 at 11.18.14 AM

“ಮಹಿಳೆಯರ ಸಮಾನತೆಗಾಗಿ ಬಾಬಾ ಸಾಹೇಬರು ಜಾರಿಗೆ ತಂದ ಹಿಂದೂ ಕೋಡ್ ಬಿಲ್ ಕುರಿತು ಯಾವುದೇ ಕಾರ್ಯಾಗಾರದಲ್ಲಿ ಚರ್ಚೆಗಳು ನಡೆಯುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕಾದ ಮಹಿಳೆಯರು ಮೌಢ್ಯ, ಕಂದಾಚಾರಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಹೆಣ್ಣುಮಕ್ಕಳು ವಿದ್ಯಾವಂತರಾಗಿದ್ದರೂ ಕೂಡ ಹೆಚ್ಚು ಮೌಢ್ಯದ ಕಡೆ ವಾಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದದ್ದೀರಾ?:ಮೈಸೂರು | ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯ: ಕೇಂದ್ರ ಸಚಿವ ಮುರುಗನ್

ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ, ಕೆಎಸ್‌ಒಯು ಕುಲಪತಿ ಶರಣಪ್ಪ ವಿ ಹಲಸೆ, ವಿಶ್ರಾಂತ ಕುಲಪತಿ ಪ್ರೊ ಕೆ ಎಸ್ ರಂಗಪ್ಪ, ರಾಮೇಗೌಡ, ಪ್ರೊ ನಾಗಣ್ಣ, ಬಂಜಗೆರೆ ಜಯಪ್ರಕಾಶ್, ಚಿಂತಕ ಪ್ರೊ ಭಗವಾನ್, ಚಂದ್ರಶೇಖರ್, ಕುಲಸಚಿವ ಪ್ರವೀಣ್ ಮೊದಲಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X