ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಸ್ಕೂಟರ್‌ಗೆ 1.61 ಲಕ್ಷ ರೂ. ದಂಡ

Date:

Advertisements

ಬೆಂಗಳೂರಿನಲ್ಲಿ ಹೆಗ್ಗಿಲ್ಲದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಸವಾರನೊಬ್ಬನ ಬೈಕ್‌ಗೆ ಬೆಂಗಳೂರು ಸಂಚಾರ ಪೊಲೀಸರು ಬರೋಬ್ಬರಿ 1.61 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವು ಬೈಕ್‌ನ ಬೆಲೆಗಿಂತಲೂ ಅಧಿಕವಾಗಿದೆ. ದಂಡದ ಮೊತ್ತದಲ್ಲಿ, ಯಾವ ಬೈಕ್‌ಗೆ ದಂಡ ವಿಧಿಸಲಾಗಿದೆಯೇ ಅಂತಹ ಮೂರು ಬೈಕ್‌ಗಳನ್ನು ಖರೀದಿಸಬಹುದು ಎಂದು ಹೇಳಲಾಗುತ್ತಿದೆ.

ಸಂಚಾರ ನಿಯಮಗಳನ್ನು ಪಾಲಿಸುವಂತೆ ಪೊಲೀಸ್‌ ಇಲಾಖೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ದಂಡದ ಪ್ರಮಾಣವನ್ನೂ ಹೆಚ್ಚಿಸಿದೆ. ಆದಾಗ್ಯೂ, ನಿಯಮ ಉಲ್ಲಂಘನೆಗೆ ಕಡಿವಾಣಿ ಬಿದ್ದಿಲ್ಲ. ಬೆಂಗಳೂರಿನ ದ್ವಿಚಕ್ರ ವಾಹನ ಸವಾರನೊಬ್ಬ 2023ರಿಂದ ಈವರೆಗೆ ಬರೋಬ್ಬರಿ 311 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದು, ಆ ಬೈಕ್‌ಗೆ ಒಟ್ಟು 1.61 ಲಕ್ಷ ರೂ. ದಂಡ ವಿಧಿಸಲಾಗಿದೆ.

ಆ ಬೈಕ್‌ ಕಲಾಸಿಪಾಳ್ಯದಲ್ಲಿ ಟ್ರಾವೆಲ್ಸ್‌ ಏಜೆನ್ಸಿ ನಡೆಸುತ್ತಿರುವ ಪೆರಿಯಸ್ವಾಮಿ ಎಂಬಾತನದ್ದು ಎಂದು ತಿಳಿದುಬಂದಿದೆ. ಬೈಕ್‌ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Advertisements

ಪೆರಿಯಸ್ವಾಮಿ ಮತ್ತು ಸುದೀಪ್‌ ಎಂಬವರು ಬಳಸುತ್ತಿದ್ದರು. ಅವರು ಎಸಗಿರುವ ನಿಯಮ ಉಲ್ಲಂಘನೆಗಳಲ್ಲಿ ಹೆಚ್ಚಾಗಿ ಹೆಲ್ಮೆಟ್‌ ಧರಿಸದೇ ಇರುವುದು, ಸಿಗ್ನಲ್‌ ಜಂಪ್‌, ಏಕಮುಖ ಚಾಲನೆ, ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಪ್ರಕರಣಗಳಿವೆ ಎಂದು ವರದಿಯಾಗಿದೆ.

ದಂಡ ಪಾವತಿಸುವಂತೆ ಬೈಕ್ ಮಾಲೀಕನಿಗೆ ಹಲವು ಬಾರಿ ನೋಟಿಸ್‌ ಕೂಡ ಜಾರಿಗೊಳಿಸಲಾಗಿತ್ತು. ಆದರೂ, ನಿಯಮಗಳನ್ನು ಪಾಲಿಸದ ಸವಾರ, ನಿರಂತರವಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾನೆ ಎಂದು ಆರೋಪಿಸಲಾಗಿದೆ.

ದಂಡ ಪಾವತಿಸುವಂತೆ ವಾಹನದ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಪಾವತಿ ಮಾಡದಿದ್ದರೆ, ಮತ್ತೊಂದು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸುತ್ತೇವೆಂದು ಕೆ.ಆರ್‌ ಮಾರುಕಟ್ಟೆ ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X