ಸಾಗರ | ಆ್ಯಂಬುಲೆನ್ಸ್ ಬಾಗಿಲು ತೆಗೆಯಲಾಗದೆ ಹರಸಾಹಸ; ಚಿಕಿತ್ಸೆಗೆ ಬಂದಿದ್ದ ವ್ಯಕ್ತಿ ಸಾವು

Date:

Advertisements

ಆ್ಯಂಬುಲೆನ್ಸ್ ಬಾಗಿಲು ತೆಗೆಯಲಾಗದೆ ವಿಳಂಬವಾಗಿದ್ದರಿಂದ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿ ಸಾವನ್ನಪ್ಪರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.

ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾದ ಗೇರ್ ಬೀಸ್ ನಿವಾಸಿ ಪ್ರಭಾಕರ ಎಂಬುವವರು ಸಾಗರ ತಾಲೂಕಿನ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲು ಸಿದ್ಧತೆಯಲ್ಲಿದ್ದಾಗ ತುರ್ತು ಸೇವೆಗೆ ಅಗತ್ಯವಿರುವ 108 ವಾಹನದ ಬಾಗಿಲು ತೆಗೆಯಲು ಬಾರದೆ ಗಂಟೆಗಟ್ಟಲೆ ಸಮಯ ವಿಳಂಬವಾಗಿದೆ.

ಬಾಗಿಲು ತೆಗೆಯಲು ಹರಸಾಹಸಪಟ್ಟು 108 ವಾಹನದ ಬಾಗಿಲು ತೆಗೆದು ಒಮ್ಮೆಲೇ ಬಾಗಿಲು ಹಾಕಿದ ಶಬ್ದಕ್ಕೆ ಚಿಕಿತ್ಸೆಗೆಂದು ಬಂದಿದ್ದ ಪ್ರಭಾಕರ ಎಂಬುವವರು ಮೃತಪಟ್ಟಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಎಸ್‌ಯುಸಿಐ ಆಗ್ರಹ

“ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವ ವಾಹನಗಳು ಸದಾ ಸಿದ್ಧತೆಯಲ್ಲಿರಬೇಕಾಗಿರುತ್ತದೆ. ಹೀಗಿರುವಾಗ ವಾಹನಗಳು ತೀರ ಹದಗೆಟ್ಟು ಹೋಗಿವೆ. ಕೂಡಲೇ ಇಂತಹ ವ್ಯವಸ್ಥೆಯನ್ನು ಸರಿಪಡಿಸದಿದ್ದರೆ ಹೋರಾಟ ಮಾಡಲಾಗುವುದು” ಎಂದು ರೈತ ಸಂಘದ ಮುಖಂಡ ರಮೇಶ್ ಐಗಿನ್ ಬೈಲ್ ಎಚ್ಚರಿಕೆ ನೀಡಿದ್ದಾರೆ.

ವರದಿ: ಧರ್ಮರಾಜ್ ಪತ್ರಕರ್ತ, ಸಾಗರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X