ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Date:

Advertisements

ಧರ್ಮಸ್ಥಳ ಸಂಘ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಳ್ಳಾರಿ ಕ್ಯಾಂಪ್‌ನಲ್ಲಿ ನಡೆದಿದೆ.

ಬಳ್ಳಾರಿ ಕ್ಯಾಂಪ್‌ ನಿವಾಸಿ ಅಕ್ರಮ್‌ ಎಂಬುವವರ ಹೆಂಡತಿ ಆಫ್ರಿನ್ ಬಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ ಎಂದು ತಿಳಿದುಬಂದಿದೆ.

ಹರಪನಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಧರ್ಮಸ್ಥಳ ಸಂಘ ಹಾಗೂ ಎಲ್ ಆಂಡ್ ಟಿ ಫೈನಾನ್ಸ್‌ನಿಂದ ಸಾಲ ಪಡೆದಿದ್ದಾರೆಂದು ತಿಳಿದು‌ಬಂದಿದೆ.

Advertisements

ಸಂತ್ರಸ್ಥ ಮಹಿಳೆ ಆಫ್ರಿನ್ ಮಾತನಾಡಿ, “ನಮಗೆ ಒಂದೊತ್ತಿನ ಊಟಕ್ಕೂ ಕಷ್ಟಪಡುವಂತಹ ಪರಿಸ್ಥಿತಿ ಎದುರಾಗಿದೆ. ಸ್ವಲ್ಪ ಸಮಯ ಕೊಡಿ, ಸಾಲ ಮರುಪಾವತಿಸುತ್ತೇವೆಂದು ಹೇಳಿದರೂ ಕೇಳುತ್ತಿಲ್ಲ. ʼಯಾರ ಬಳಿಯಾದರೂ ಸಾಲ ಪಡೆದು ನಮ್ಮ ಸಾಲ ಕಟ್ಟಿ, ನೀವು ವಿಷ ತೆಗೆದುಕೊಳ್ಳುತ್ತೀರೋ, ಬಿಡ್ತಿರೊ ಅದು ನಮಗೆ ಬೇಕಿಲ್ಲ. ನೀವು ದುಡ್ಡು ಕಟ್ಟಕಬೇಕು ಅಷ್ಟೇʼ ಅಂತ ಧರ್ಮಸ್ಥಳ ಸಂಘದ ಅಧಿಕಾರಿ ಜಗದೀಶ್ ಎನ್ನವವರು ಕೆಟ್ಟಕೆಟ್ಟ ಶಬ್ದಗಳಿಂದ ಬೈದು ಬೆದರಿಸಿದ್ದಾರೆ. ಅವರ ಬೈಗುಳ ಕೇಳಿ ಬದುಕಬಾರದೆಂದು ಇಂಥ ನಿರ್ಧಾರ ತೆಗೆದುಕೊಂಡಿದ್ದೇನೆ. ಅವರ ಕಾಟ ತಡಯಲಾಗದ ನನಗೆ ಸಾವೇ ಗತಿ” ಎಂದು ಸಂಕಟ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಶ್ವ ಕ್ಯಾನ್ಸರ್‌ ದಿನ: ಒಂದು ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾದ ಕ್ಯಾನ್ಸರ್ ಪೀಡಿತ ಮಕ್ಕಳು

ಸಂತ್ರಸ್ತೆಯ ಸಹೋದರ ಮಾತನಾಡಿ, “ಧರ್ಮಸ್ಥಳ ಸಂಘದ ಅಧಿಕಾರಿಗಳು ಪದೇಪದೆ ಮನೆ ಹತ್ತಿರ ಬಂದು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಾಲ ಕಟ್ಟಬೇಕು ಅಂತ ರಾತ್ರಿ ಹತ್ತು ಗಂಟೆವರೆಗೂ ಮನೆ ಮುಂದೆ ಕುಂತು ಸಾಲ ವಸೂಲಿ ಮಾಡುತ್ತಾರೆ. ಈ ಸಂಘದ ಸಾಲ ಕಟ್ಟಲು ನಮ್ಮಕ್ಕ ಮತ್ತೊಂದು ಸಂಘದಲ್ಲಿ ಸಾಲ ತೆಗೆದುಕೊಳ್ಳಬೇಕು. ಈ ಸದ್ಯ ಸ್ವಲ್ಪ ಸಮಯ ಕೊಡಿ, ಹೀಗೆ ಕುಳಿತರೆ ಸಾಯುವುದೊಂದೇ ದಾರಿ ನಮಗೆ ಉಳಿದಿರುವುದು, ಎಂದರೆ, ʼಸಾಯಿರಿ, ಸತ್ತರೆ ಸಂಘದ ಸಾಲ ಮನ್ನಾ ಆಗುತ್ತೆʼ ಎಂದಿದ್ದಾರೆ. ಹಾಗಾಗಿ ನಮ್ಮಕ್ಕ ವಿಷ ಸೇವಿಸಿ ಸಾಯಲು ಮುಂದಾಗಿದ್ದಾಳೆ” ಎಂದು ಅವಲತ್ತುಕೊಂಡಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 8
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X