ಕೊಪ್ಪಳ | ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆ; ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ

Date:

Advertisements

ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆಗೈದ ಘಟನೆ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್‌ಪಿ ಶರಣಬಸಪ್ಪ ಸುಬೇದಾರ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ಸಮೀಪದ ಗೊರಲೇಕೊಪ್ಪಯ ಬಾವಿಯಲ್ಲಿ ಕಳೆದ ಭಾನುವಾರ ಸ್ನೇಹಿತರೊಂದಿಗೆ ಈಜಲು ಹೋದ ಪ್ರಜ್ವಲ್(15) ಎಂಬ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಮೊದಲಿಗೆ ಇದು ಸಹಜ ಸಾವು ಎಂದು ಹೇಳಲಾಗಿತ್ತು. ಕುಟುಂಬಸ್ಥರು ಮೃತ ಬಾಲಕನ ಸ್ನೇಹಿತರನ್ನು ವಿಚಾರಿಸಿದಾಗ ಇದು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿರುವುದೆಂದು ತಿಳಿದುಬಂದಿತ್ತು.

ಕೊಲೆ ಆರೋಪಿ ಶಂಕರಪ್ಪ ಈರಪ್ಪ ಈಬೇರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಅಜ್ಜಿಯನ್ನು ಕೊಂದು ‘ಮಿಸ್ಸಿಂಗ್‌ ಕಂಪ್ಲೇಂಟ್‌’ ನೀಡಿದ ಮೊಮ್ಮಗ; ತನಿಖೆ ಬಳಿಕ ಸತ್ಯ ಬಯಲು

ಈಗಾಗಲೇ ಆರೋಪಿ ಶಂಕರಪ್ಪ ಈಬೇರಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಲಿತ ದೌರ್ಜನ್ಯ ಅಡಿಯಲ್ಲಿ ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್‌ಪಿ ಶರಣಬಸಪ್ಪ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X