ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

Date:

Advertisements

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು ‘ರೆಫರಿ’ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೆಫರಿ ಮೇಲೆ ಹಲ್ಲೆ ನಡೆಸಿದ ಕುಸ್ತಿಪಟುವನ್ನು ಮಹಾರಾಷ್ಟ್ರದ ನಾಂದೇಡ್‌ನ ಶಿವರಾಜ್‌ ರಕ್ಷೆ ಎಂದು ಹೇಳಲಾಗಿದೆ.

ಅಹಲ್ಯಾನಗರದಲ್ಲಿ ‘ಕೇಸರಿ ಕುಸ್ತಿ ಪಂದ್ಯಾವಳಿ’ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ಶಿವರಾಜ್‌ ರಕ್ಷೆ ಮತ್ತು ಪೃಥ್ವಿರಾಜ್ ಮೊಹೋಲ್‌ ನಡುವೆ ಸೆಮಿಫೈನಲ್‌ ಪಂದ್ಯ ನಡೆಯುತ್ತಿತ್ತು. ಪಂದ್ಯದಲ್ಲಿ ಪೃಥ್ವಿರಾಜ್ ಮೊಹೋಲ್ ಗೆದಿದ್ದಾರೆಂದು ರೆಫರಿಗಳು ಘೋಷಿಸಿದರು.

Advertisements

ಈ ವೇಳೆ, ರೆಫರಿಗಳು ತಪ್ಪು ತೀರ್ಪು ನೀಡಿದ್ದಾರೆ. ಅಪ್ರಮಾಣಿಕವಾಗಿ ತೀರ್ಪು ಪ್ರಕಟಿಸಿದ್ದಾರೆ ಎಂದು ರೆಫರಿ ಮೇಲೆ ಶಿವರಾಜ್ ರಕ್ಷೆ ಹಲ್ಲೆ ನಡೆಸಿದ್ದಾರೆ.

ಘಟನೆಯ ಬಳಿಕ ಶಿವರಾಜ್ ರಕ್ಷೆ ಅವರನ್ನು ಪಂದ್ಯಾವಳಿಯಿಂದ ಹೊರಗಿಡಲಾಗಿದೆ.

“ನನ್ನನ್ನು ತಪ್ಪಾಗಿ ಹೊರಗಿಡಲಾಗಿದೆ. ರೆಫರಿಯ ನಿರ್ಧಾರದಲ್ಲಿ ಸ್ಪಷ್ಟವಾಗಿ ಪಕ್ಷಪಾತವಿತ್ತು. ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ದೂರು ನೀಡಿದ್ದೇನೆ. ತನಿಖೆಯಾಗಲಿ. ರೆಫರಿ ನಿರ್ಧಾರ ಸರಿಯಾಗಿದೆ ಎಂದಾದರೆ, ನಾನು ಆಟವನ್ನು ಬಿಡುತ್ತೇನೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X