ಹಾವೇರಿ | ತಡಸ ಗ್ರಾಮಕ್ಕೆ ಮಿನಿ ಬಸ್ ನಿಲ್ದಾಣ ನಿರ್ಮಿಸಲು ಕರವೇ ಗಜಪಡೆ ಆಗ್ರಹ

Date:

Advertisements

ಮಳೆಗಾಲದಲ್ಲಿ ಹಾಗೂ ಬೇಸಿಗೆ ಕಾಲದಲ್ಲಿ ಬಹಳ ತೊಂದರೆ ಆಗುತ್ತಿದೆ. ಜನರಿಗೆ ಅನುಕೂಲಕ ಆಗುವಂತೆ ತಡಸ ಗ್ರಾಮಕ್ಕೆ ಮಿನಿ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಕರವೇ ಗಜಪಡೆ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಒತ್ತಾಯಿಸಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದಲ್ಲಿ ಮಿನಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಕಂಟ್ರೋಲರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ ಮಾತನಾಡದರು.

“ಸಾರ್ವಜನಿಕರ ಅನುಕೂಲಕ್ಕಾಗಿ ತಡಸ ಗ್ರಾಮ ಪಂಚಾಯತ್ ಎದುರು ಗಡೆ ಹುಬ್ಬಳ್ಳಿ ಶಿರಸಿ ರೋಡ್ ಪಕ್ಕ ಒಂದು ಮಿನಿ ಬಸ್ ನಿಲ್ದಾಣ ಅವಶ್ಯಕತೆ ಇರುತ್ತದೆ. ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವಿಶೇಷವಾಗಿ ವಿಧ್ಯಾರ್ಥಿಗಳಿಗೆ ವೃದ್ಧರಿಗೆ ಹಾಗೂ ವಿಶೇಷ ಚೇತನರಿಗೆ ಸಮಸ್ಯೆ ಆಗುತ್ತಿದೆ. ಕೂಡಲೇ ಮಿನಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

Advertisements

ಒಂದು ವೇಳೆ ಮಿನಿ ಬಸ್ ನಿಲ್ದಾಣ ನಿರ್ಮಾಣ ಮಾಡದಿದ್ದಲ್ಲಿ ಜಿಲ್ಲಾ ಕೇಂದ್ರ ಕಛೇರಿ ಎದುರಿಗೆ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ಯಲ್ಲಪ್ಪ ಮರಾಠೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ತುಂಗಾ ಮೇಲ್ದಂಡೆ ಕಾಲುವೆ ನೀರು ಸೋರಿಕೆ; ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸ್ಥಳೀಯರ ಆಕ್ರೋಶ

ಈ ಒಂದು ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಶಂಕರ ಬಡಿಗೇರ, ಜಿಲ್ಲಾ ಗೌರವಾಧ್ಯಕ್ಷ ಗಂಗಾಧರಯ್ಯ ಪಾಟೀಲ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾಬಾಯಿ ಲಮಾಣಿ, ಜಿಲ್ಲಾ ಉಪಾಧ್ಯಕ್ಷ ಯೊಸುಫ್ ಸೈಕಲಗಾರ, ವಾಗೀಸ್ ಎಮ್ಮಿ, ಬಸವರಾಜ ಪಟ್ಟಣಶೆಟ್ಟಿ , ಈರಪ್ಪ ಅಂಗಡಿ , ರೇಶ್ಮಾ ಬೀರಬ್ಬಿ,ರವಿ ಮಾಮನಿ, ಜ್ಯೋತಿ ಅರಕಸಾಲಿ, ಮಹಾವೀರ ಹಳ್ಳಿಯವರ, ರಾಮಣ್ಣ ಕಂಮಾರ,ಕಾಸಪ್ಪ ಪೂಜಾರ, ಈರಣ್ಣ ಬೋಸ್ಲೆ, ಸಿದ್ದಯ್ಯ ಹಿರೇಮಠ್ , ಬ್ರಹ್ಮಾನಂದ ಕಮ್ಮಾರ್, ನಾಗರಾಜ್ ಬಡಿಗೇರ್ , ಅದು ಕೊಲ್ಲಾಪುರ್ , ರವಿ ಪಾಸ್ಟರ , ಮೂಗಣ್ಣ ತಡಸ, ಕೃಷ್ಣ ಬಡಿಗೇರ್ , ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X