ಬೆಳಗಾವಿ | ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಕುಸಿತ

Date:

Advertisements

ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರೊದಗಿಸುವ ಪ್ರಮುಖ ನೀರಿನ ಮೂಲವಾದ ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಲ್ಲಿ ಅಪಾರ ಪ್ರಮಾಣದ ಹೂಳು ತುಂಬಿದ್ದು, ಅಣೆಕಟ್ಟೆಯ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ಹೂಳು ತೆಗೆಯುವಂತೆ ಈ ಜಿಲ್ಲೆಗಳ ಜನರು ಒತ್ತಾಯಿಸುತ್ತಿದ್ದರೂ, ಇದೂವರೆಗೂ ಹೂಳು ತೆಗೆಯಲಾಗಿಲ್ಲ. ಹೀಗಾಗಿ, ಹೆಚ್ಚಿ ಪ್ರಮಾಣದ ನೀರು ಸಂಗ್ರಹವಾಗದೇ, ಮೂರು ಜಿಲ್ಲೆಗಳ ನರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮ ಹಿಡಕಲ್ ಅಣೆಕಟ್ಟನ್ನು 1977ರಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಅಣೆಕಟ್ಟು 62.5 ಮೀಟರ್ ಎತ್ತರವಿದ್ದು, 10 ಲಂಬ ಕ್ರೆಸ್ಟ್ ಗೇಟ್‌ಗಳನ್ನು ಹೊಂದಿದೆ. ಜಲಾಶಯವು 51.1 ಟಿಎಂಸಿ ಅಡಿಗಳಷ್ಟು ಸಂಗ್ರಹ ಸಾಮರ್ಥ್ಯ ಹೊಂದಿದ್ದು, 8,20,000 ಎಕರೆಗೂ ಹೆಚ್ಚು ಕೃಷಿ ಭೂಮಿಗೆ ನೀರನ್ನು ಒದಗಿಸುತ್ತದೆ. ಅಲ್ಲದೆ, ಎರಡು ವಿದ್ಯುತ್ ಘಟಕಗಳನ್ನೂ ಹೊಂದಿದ್ದು, ಸುಮಾರು 32 ಮೆಗಾ ವ್ಯಾಟ್‌ ಜಲವಿದ್ಯುತ್ ಉತ್ಪಾದಿಸುತ್ತವೆ. ಹಿಡಕಲ್ ಅಣೆಕಟ್ಟು ಯೋಜನೆಯಿಂದ ಬೆಳಗಾವಿ, ಹುಕ್ಕೇರಿ, ಸಂಕೇಶ್ವರ, ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಅಂದಿನಿಂದ ಇಂದಿನವರೆಗೂ (45 ವರ್ಷ) ಈ ಜಲಾಶಯದಲ್ಲಿ ಒಮ್ಮೆಯೂ ಹೂಳು ತೆಗೆಯಲಾಗಿಲ್ಲ. ಪರಿಣಾಮ, ನೀರಿನ ಸಂಗ್ರಹಣಾ ಮಟ್ಟ ಕುಸಿದಿದೆ. ಇದು ಮೂರು ಜಿಲ್ಲೆಗಳ ಜನರನ್ನು ಆತಂಕಕ್ಕೆ ದೂಡಿದೆ. ಇತ್ತೀಚೆಗೆ ಹುಕ್ಕೇರಿಯಲ್ಲಿ ಶಾಸಕ ನಿಖಿಲ್ ಕತ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಹಿಡಕಲ್ ಜಲಾಶಯದ ಹೂಳು ಕುರಿತು ಚರ್ಚೆ ನಡೆದಿದೆ.

Advertisements

ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಜಲವಿಜ್ಞಾನದ ಸಮೀಕ್ಷೆಯ ಪ್ರಕಾರ, ರಾಜ್ಯದ ಹಲವಾರು ಅಣೆಕಟ್ಟುಗಳ ಸಂಗ್ರಹಣಾ ಸಾಮರ್ಥ್ಯವು ಹೂಳಿನಿಂದ ಕಡಿಮೆಯಾಗಿದೆ. ತುಂಗಭದ್ರಾ, ನಾರಾಯಣಪುರ, ಆಲಮಟ್ಟಿ, ಹಿಡಕಲ್ ಜಲಾಶಯವೂ ಸೇರಿದಂತೆ ಹೆಚ್ಚಿನ ಜಲಾಶಯಗಳಲ್ಲಿ ಹೂಳು ಸಂಗ್ರಹವಾಗಿದ್ದು, ಸಂಗ್ರಹ ಸಾಮರ್ಥ್ಯ ಕಳೆದುಕೊಂಡಿದೆ.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಅಣೆಕಟ್ಟುಗಳಲ್ಲಿ ಹೆಚ್ಚಿನ ಪ್ರಮಾಣದ ಹೂಳು ತುಂಬಿರುವುದು ಆತಂಕಕಾರಿಯಾಗಿದೆ.
2019ರಲ್ಲಿ ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಕಚೇರಿಗೆ ಸಮೀಕ್ಷೆಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್ (ಕೆಎನ್‌ಎನ್‌ಎಲ್) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ವರದಿಯ ಬಗ್ಗೆ ಸರ್ಕಾರದಿಂದ ಇದುವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

“ನೀರು ತುಂಬಿದ ಅಣೆಕಟ್ಟಿನ ಹೂಳು ತೆಗೆಯುವುದು ಕಷ್ಟಕರ.’1 ಟಿಎಂಸಿ ಅಡಿ ಹೂಳು ತೆಗೆಯಲು ಅಂದಾಜು 5,000 ಕೋಟಿ ರೂ. ವೆಚ್ಚವಾಗುತ್ತದೆ. ಆ ವೆಚ್ಚದಲ್ಲಿ ಹೊಸ ಅಣೆಕಟ್ಟು ನಿರ್ಮಿಸಬಹುದು,” ಎಂದು ನೀರಾವರಿ ಇಲಾಖೆಯ ನಿವೃತ್ತ ಅಧಿಕಾರಿ ಜಿ.ಎಂ ಶರಭಯ್ಯ ಹೇಳಿದ್ದಾರೆ.

“ಹಿಡಕಲ್ ಜಲಾಶಯದ ಹೂಳು ಶೇಖರಣೆಯಿಂದ ಸುಮಾರು 4-5 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಕುಸಿದಿರುವುದು ನಿಜ. ಹೂಳು ಮಾತ್ರ ಈ ಜಲಾಶಯದ ಸಮಸ್ಯೆಯಲ್ಲ. ಅಣೆಕಟ್ಟು 45 ವರ್ಷಗಳಷ್ಟು ಹಳೆಯದು. ಇಲಾಖೆಯ ಹಿರಿಯ ಅಧಿಕಾರಿಗಳು ಹೂಳಿನ ಸಮಸ್ಯೆಗೆ ಲಾಭದಾಯಕ ಪರಿಹಾರ ಹುಡುಕುತ್ತಿದ್ದಾರೆ” ಎಂದು ಹಿಡಕಲ್ ಅಣೆಕಟ್ಟೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್.ಎಂ ಮಡಿವಾಳೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X