ವಿಜಯಪುರ | ಬೇಸಿಗೆ ಬೇಗೆ ನೀಗಲು ಕೆರೆಗಳಿಗೆ ನೀರು: ಶಾಸಕ ಯಶವಂತರಾಯಗೌಡ

Date:

Advertisements

ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕಿನ ಸುಮಾರು 19 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ ಪಾಟೀಲ ಹೇಳಿದರು.

ಹೊರ್ತಿಯ ಅಗಸನಾಳ ಕಾಲುವೆ ಬಳಿ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ, ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯಡಿ ಜಾಕ್‌ವೆಲ್ ಮೂಲಕ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಕೆರೆಗಳಿಗೆ ನೀರು ಹರಿಸುವುದರಿಂದ ಅಂತರ್ಜಲ ಮಟ್ಟ, ಬಾವಿ ಹಾಗೂ ಬೋರವೆಲ್‌ಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತದೆ. ಇದರಿಂದ ಕುಡಿಯುವ ನೀರು ಮತ್ತು ಹೊಲ-ಗದ್ದೆಗಳಿಗೆ ನೀರು ಹರಿಸಲು ಅನೂಕೂಲ ಆಗಲಿದೆ. ಬೇಸಿಗೆಗೆ ನೀರಿನ ಅವಶ್ಯಕತೆ ಸಾಮಾನ್ಯ ದಿನಗಳಿಗಿಂತ ಹೆಚ್ಚಾಗಿರುವುದರಿಂದ ನೀರಿನ ಕೊರತೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದರು.

WhatsApp Image 2025 02 05 at 9.58.36 AM 1

ಕಾರ್ಯಕ್ರಮಕ್ಕೂ ಮುನ್ನ ಇಂಡಿ ತಾಲೂಕಿನ ಹೊರ್ತಿ, ಕೊಳರಗಿ, ನಿಂಬಾಳ, ದೇಗಿನಾಳ, ಬಬಲಾದಿ, ಹಲಗುಣಕಿ, ಗುಂಡವಾನ, ಕೂಡಗಿ, ಸಾವಳಸಂಗ, ಸೋನಕನಹಳ್ಳಿ, ಹಡಲಸಂಗ ಮುಂತಾದ 13 ಕೆರೆಗಳು ಹಾಗೂ ಜಿಗಜಿಣಗಿ, ತಾಲೂಕಿನ ಸಾತಲಗಾಂವ, ಇಂಚಗೇರಿ, ಶಿಗಣಾಪುರ, ನಂದರಗಿ ಮುಂತಾದ ಕೆರೆಗಳು ಸೇರಿದಂತೆ ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯ ಜಾಕ್‌ವೆಲ್ ವೀಕ್ಷಣೆ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಶೋಷಿತರ ಗೌರವಯುತ ಬದುಕಿಗೆ ಅಂಬೇಡ್ಕರ್‌ ಕಾರಣ: ಚಿಂತಕ ರಂಜಾನ್ ದರ್ಗಾ

ಈ ವೇಳೆ ನಾಗಠಾಣ ಶಾಸಕ ವಿಠ್ಠಲ್ ಕಟಕದೊಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುರಣಗೌಡ ಪಾಟೀಲ, ಸದಸ್ಯ ಮಹಾದೇವ ಪೂಜಾರಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ ನಾಯಕ, ಇಲಿಯಾಸ ಬೋರಾಮಣಿ, ರವಿದಾಸ, ಜಾಧವ, ಪ್ರಕಾಶಗೌಡ ಪಾಟೀಲ, ರೈತ ಮುಖಂಡ ಗುರುನಾಥ ಬಗಲಿ, ಮಲಗೌಡ ಬಿರಾದಾರ, ಕೃಷ್ಣಾ ಭಾಗ್ಯ ಜಲನಿಗಮ ನಿಗಮದ ಎಂಜಿನಿಯರ್‌ಗಳಾದ ಡಿ.ಬಸವರಾಜ, ಮಹೇಶ ರಿಯಾಜ್ ಬಾಗಲಕೋಟೆ, ಗೋವಿಂದ ರಾಠೋಡ, ಅಶೋಕ ರೆಡ್ಡಿ ಪಾಟೀಲ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X