ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರ ಬಂಧನ

Date:

Advertisements

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿರುವ ಶೇಷಗಿರಿಹಳ್ಳಿ ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಟೋಲ್‌ ಸಿಬ್ಬಂದಿ ಪವನ್‌ ನಾಯಕ್‌ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಆರಂಭಿಸಿದ್ದರು. ಇದೀಗ, ಬೆಂಗಳೂರಿನ ಸಂಕದಕಟ್ಟೆಯ ಅಭಿಷೇಕ್ ಮತ್ತು ಸಂತೋಷ್‌ ಎಂಬ ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಈ ಇಬ್ಬರೂ, ಆಹಾರ ಪೂರೈಕೆ ಕಂಪನಿಯಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಜೂನ್‌ 5ರ ರಾತ್ರಿ ರಾಮನಗರ ಕಡೆಯಿಂದ ಬೆಂಗಳೂರಿಗೆ ಆರೋಪಿಗಳು ಮತ್ತವರ ಸ್ನೇಹಿತರು ಕಾರಿನಲ್ಲಿ ಬಂದಿದ್ದರು. ಈ ವೇಳೆ, ಶೇಷಗಿರಿಹಳ್ಳಿ ಟೋಲ್‌ನಲ್ಲಿ ಟೋಲ್‌ ಶುಲ್ಕ ಪಾವತಿಸಲು ನಿಂತಿದ್ದರು. ಆರೋಪಿಗಳು ಬರುತ್ತಿದ್ದ ಲೇನ್‌ನಲ್ಲಿ ಆಟೋವೊಂದು ಶುಲ್ಕ ಪಾವತಿ ಮಾಡುತ್ತಿತ್ತು. ಆಟೋಗೆ ಫಾಸ್ಟ್ಯಾಗ್‌ ಇಲ್ಲದ ಕಾರಣ, ಪಾವತಿ ಮಾಡುವುದು ತಡವಾಗಿತ್ತು. ಈ ಕಾರಣಕ್ಕಾಗಿ, ಆರೋಪಿಗಳು ಟೋಲ್‌ ಸಿಬ್ಬಂದಿ ಪವನ್‌ ನಾಯಕ್‌ನೊಂದಿಗೆ ಗಲಾಟೆ ಮಾಡಿದ್ದರು ಎಂದು ವರದಿಯಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ?: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ₹10 ಸಾವಿರ ದರ ನಿಗದಿ ಆರೋಪ; ತನಿಖೆ ಮಾಡುತ್ತಾ ಆರೋಗ್ಯ ಇಲಾಖೆ?

ಗಲಾಟೆ ಅತೀರೇಕಕ್ಕೆ ಹೋಗಿ, ಸಿಬ್ಬಂದಿಗಳು ಮತ್ತು ಆರೋಪಿಗಳು ಕೈಕೈ ಮಿಲಾಯಿಸಿದ್ದರು. ಅಲ್ಲಿದ್ದ ಸ್ಥಳೀಯರು ಎಲ್ಲರನ್ನೂ ಸಮಾಧಾನಗೊಳಿಸಿ, ಅಲ್ಲಿಂದ ಕಳಿಸಿದ್ದರು. ಆದರೆ, ಆರೋಪಿ ಸಂತೋಷ್ ಮತ್ತು ಅಭಿಷೇಕ್ ಟೋಲ್‌ ಸಮೀಪವೇ ಪವನ್‌ಗಾಗಿ ಕಾದು ಕುಳಿದ್ದರು. ರಾತ್ರಿ 12.30ರ ಸುಮಾರಿಗೆ ಪವನ್ ಕೆಲಸ ಮುಗಿಸಿಕೊಂಡು ತನ್ನ ಸ್ನೇಹಿತ ಮಂಜುನಾಥ್‌ ಜೊತೆ ನಡೆದುಕೊಂಡು ಹೋಗುವಾಗ, ಇಬ್ಬರ ಮೇಲೂ ಆರೋಪಿಗಳು ಏಕಾಏಕಿ ದಾಳಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಯಿಂದ ತಲೆಗೆ ತೀವ್ರವಾಗಿ ಪಟ್ಟಾಗಿದ್ದ ಪವನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಿಸದೆ ಅತ ಮೃತಪಟ್ಟಿದ್ದರು. ಮಂಜುನಾಥ್‌ಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X